ಕನ್ನಡಪ್ರಭ ವಾರ್ತೆ ಸುರಪುರ
ಈ ವೇಳೆ ಕನ್ನಡಪ್ರಭದೊಂದಿಗೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ, ತಂದೆ ರಾಜಾ ವೆಂಕಟಪ್ಪ ನಾಯಕ ಅವರಿಲ್ಲದೆ ಪ್ರಥಮ ಚುನಾವಣೆ ಎದುರಿಸಿದ್ದೇನೆ. ಸಾಕಷ್ಟು ಅನುಭವವಾಗಿದೆ. ಕಾರ್ಯಕರ್ತರು, ಮುಖಂಡರು, ಬೆಂಬಲಿಗರು, ಅಭಿಮಾನಿಗಳು ಉತ್ಸಾಹ ತೋರಿದ್ದಾರೆ. ಎಲ್ಲೆಡೆ ಉತ್ತಮ ಮತದಾನವಾಗಿದ್ದು, ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಶೀಘ್ರದಲ್ಲೇ ಎಂದಿನಂತೆ ಕಾರ್ಯಕರ್ತರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುವೆ ಎಂದರು.
ಅಧಿಕಾರ ಶಾಶ್ವತವಲ್ಲ. ಅಧಿಕಾರ ಬರುತ್ತೆ ಹೋಗುತ್ತೆ. ನನ್ನ ಕಾರ್ಯಕರ್ತರನ್ನು ಕಾಯುವ ಕೆಲಸ ಮಾಡಿ ಹುಣಸಗಿ ಮತ್ತು ಸುರಪುರ ತಾಲೂಕುಗಳನ್ನು ಅಭಿವೃದ್ಧಿ ಮಾಡುವೆ. ತಂದೆ ಬಿಟ್ಟು ಹೋಗಿರುವ ಅಭಿವೃದ್ಧಿ ಕೆಲಸಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರೈಸಿ ನನ್ನ ಕನಸಿನ ಅಭಿವೃದ್ಧಿ ಕೆಲಸ ನಂತರ ಒತ್ತು ನೀಡುವೆ ಎಂದರು.