ಕನ್ನಡಪ್ರಭ ವಾರ್ತೆ ಮಣಿಪಾಲ
ಈ ಕಾರ್ಯಾಗಾರವು ವಿಶೇಷವಾಗಿ ಹೃದಯದಲ್ಲಿ ವಿದ್ಯುತ್ ಕ್ರಿಯೆಯನ್ನು ಪರಿಶೀಲಿಸುವ ಮತ್ತು ಕಾಯಿಲೆಯನ್ನು ನಿರ್ಧರಿಸುವ ವಿಚಾರದ ಬಗ್ಗೆ ಕೇಂದ್ರೀಕೃತವಾಗಿದ್ದು, ಇದು ತಂತ್ರಜ್ಞಾನ ಮತ್ತು ಆರೋಗ್ಯ ಆರೈಕೆಯ ವಿಭಾಗಗಳ ನಡುವಿನ ಅಂತರವನ್ನು ಕಡಿಮೆಗೊಳಿಸುವ ಮತ್ತು ಭಾಗಿಗಳಾದವರಿಗೆ ಸಮಗ್ರ ಪ್ರಾಯೋಗಿಕ ಅನುಭವವನ್ನು ನೀಡುವ ಕಾರ್ಯಾಗಾರವಾಗಿತ್ತು.
ಕೆಎಂಸಿಯ ನುರಿತ ಬೋಧಕರು ತರಗತಿಗಳನ್ನು ನಡೆಸಿಕೊಟ್ಟರಲ್ಲದೆ, ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಉಪಕರಣಗಳ ಕಾರ್ಯ ವೈಖರಿ, ಅವುಗಳ ಅನ್ವಯಗಳು, ಮತ್ತು ರೋಗಿಗಳ ಚಿಕಿತ್ಸೆಯ ಸವಾಲುಗಳ ಬಗ್ಗೆ ಭಾಗಿಗಳು ತಿಳಿದುಕೊಂಡರು.ಮಾಹೆಯ ತಂತ್ರಜ್ಞಾನ ಮತ್ತು ವಿಜ್ಞಾನ ವಿಭಾಗದ ಸಹಉಪಕುಲಪತಿ ಡಾ. ನಾರಾಯಣ ಸಭಾಹಿತ್ ಅವರು ಭವಿಷ್ಯದಲ್ಲಿ ತಂತ್ರಜ್ಞಾನ ಮತ್ತು ವೈದ್ಯಕೀಯ ವಿಭಾಗಗಳ ನಡುವೆ ಸಂಬಂಧವು ಹೆಚ್ಚಾಗಲಿದ್ದು, ಇಂಜಿನಿಯರ್ಗಳನ್ನು ವೈದ್ಯಕೀಯ ಜ್ಞಾನದೊಂದಿಗೆ ಸಿದ್ಧಗೊಳಿಸುವುದರ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಕಾರ್ಯಾಗಾವು ಪ್ರಮುಖ ಹೆಜ್ಜೆಯಾಗಿದೆ ಎಂದರು.
ಮಾಹೆಯ ನಿಯೋಜಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರವಿರಾಜ ಎನ್.ಎಸ್. ಉಪಸ್ಥಿತರಿದ್ದರು. ಕಾರ್ಪೊರೇಟ್ ರಿಲೇಶನ್ಸ್ ವಿಭಾಗದ ನಿರ್ದೇಶಕ ಡಾ. ಹರೀಶ ಕುಮಾರ್ ಸ್ವಾಗತಿಸಿ, ವಂದಿಸಿದರು. ವಿನೋದ್ ಸಿ. ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.