ಕನ್ನಡಪ್ರಭ ವಾರ್ತೆ ಪಾವಗಡ
ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್ವರಿ, ಕಾಲೇಜಿನಿಂದ ರಾಮಯ್ಯನ ಪಾಳ್ಯಕ್ಕೆ ತೆರಳಲು ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕೊತ್ತೂರಿನಿಂದ ಪಾವಗಡ ಮಾರ್ಗ ವೇಗವಾಗಿ ಬಂದ ಕಾರು ಗುದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ವಿದ್ಯಾರ್ಥಿನಿಯನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಘಟನೆ ಕುರಿತು ಪ್ರಕರಣ ದಾಖಲು ಆಗುವವರೆವಿಗೂ ವಾಪಸ್ಸಾಗುವುದಿಲ್ಲ ಎಂದು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು ಎಫ್ಐಆರ್ ಗೆ ಪಟ್ಟುಹಿಡಿದರು. ಕಾರು ವಶಕ್ಕೆ ಪಡೆದ ಪೊಲೀಸರು ಚಾಲಕ ಕೊತ್ತೂರು ಗ್ರಾಮದ ಚಿತ್ತಯ್ಯನ ಪುತ್ರ ಯೋಗರಾಜ್ನನ್ನು ಬಂಧಿಸಿದ್ದು, ಸ್ಥಳಕ್ಕೆ ಆಗಮಿಸಿದ ಪಿಎಸ್ಐ ಗುರುಮೂರ್ತಿ ಘಟನೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಶಿರಾ ಹಾಗೂ ಪಾವಗಡ ಪ್ರಮುಖ ರಸ್ತೆಯ ಬಳಿ ಮಹಿಳಾ ಕಾಲೇಜು ಬಳಿ ವೇಗವಾಗಿ ವಾಹನಗಳು ಒಡಾಡುತ್ತಿದ್ದು, ಈ ರಸ್ತೆಯಲ್ಲಿ ಹೆಚ್ಚು ಅಪಘಾತ ಸಂಭವಿಸುತ್ತಿವೆ. ರಸ್ತೆ ಉಬ್ಬು ಹಾಕುವಂತೆ ಪ್ರಾಂಶುಪಾಲ, ವಿದ್ಯಾರ್ಥಿನಿಯರು ಮನವಿ ಪತ್ರ ಸಲ್ಲಿಸಿದ್ದರೂ ಲೋಕೋಪಯೋಗಿ ಇಲಾಖೆಯ ಎಇಇ ಅನಿಲ್ ಕುಮಾರ್ ಕ್ರಮವಹಿಸಿಲ್ಲ. ಈ ಅಧಿಕಾರಿಗಳ ವಿರುದ್ಧ ಜನಪ್ರತಿನಿಧಿಗಳಿಗೆ ದೂರು ಸಲ್ಲಿಸುವುದಾಗಿ ವಿದ್ಯಾರ್ಥಿನಿಯರು ಎಚ್ಚರಿಸಿದ್ದಾರೆ.
ತಾಲೂಕು ರೈತ ಸಂಘದ ಅಧ್ಯಕ್ಷ ದೊಡ್ಡಹಟ್ಟಿಯ ಪೂಜಾರಪ್ಪ, ನಲಿಗಾನಹಳ್ಳಿಯ ಮಂಜುನಾಥ್, ಕಂಪ್ಯೂಟರ್ ವಿಭಾಗದ ಗುರುಪ್ರಸಾದ್, ಅಶ್ವಿನಿ, ರಮ್ಯಾ, ಸುರೇಖಾ, ನವ್ಯ ರಾಧ, ಮೌನ, ಶಿಲ್ಪಾ ಚಾಯಾ, ಭೂಮಿಕಾ ಉಷಾ ಕಡಮಲಕುಂಟೆ ಗೋವಿಂದಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅನಿಲ್ಕುಮಾರ್, ಸುಬ್ರಮಣಿ ಜನಾರ್ದನ, ಆದರ್ಶ ಮೋಹನ್ ಮತ್ತು ನರ್ಸಿಂಗ್ ವಿದ್ಯಾರ್ಥಿ ಓಬಳಾಪುರದ ಪಿ.ಮನ್ವಿತ್ಕುಮಾರ್ ಇದ್ದರು.
23ಪಿವಿಡಿ3