ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
------------------------
ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕೆ ಆಹ್ವಾನಮಡಿಕೇರಿ: ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 2024 ಜ. 1ರಿಂದ 2024 ಡಿ.. 31ರ ವರೆಗೆ ಪ್ರಥಮ ಅವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ.ಲೇಖಕರು, ಪ್ರಕಾಶಕರು, ಸಂಪಾದಕರು ತಮ್ಮ 1 ಕೃತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಜೂ. 30 ರೊಳಗೆ ತಲುಪುವಂತೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಿಕೊಡಲು ಕೋರಿದೆ. ಈ ಪುಸ್ತಕವು ತಜ್ಞರಿಂದ ಪ್ರಕಾರವಾರು ಆಯ್ಕೆಯಾದಲ್ಲಿ, ನಂತರ ಪುಸ್ತಕ ಬಹುಮಾನಕ್ಕೆ ಲೇಖಕರಿಂದ ಉಳಿದಂತೆ 3 ಪ್ರತಿಗಳನ್ನು ಮೌಲ್ಯಮಾಪಕರ ಪರಿಶೀಲನೆಗೆ ತರಿಸಿಕೊಳ್ಳಲಾಗುವುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಅವರು ತಿಳಿಸಿದ್ದಾರೆ.ಈಗಾಗಲೇ ಪುಸ್ತಕ ಬಹುಮಾನ ಪಡೆದ ಸಂಪಾದಕರು/ ಲೇಖಕರು ಮತ್ತೆ ಪುಸ್ತಕ ಬಹುಮಾನ ಯೋಜನೆಗೆ ಕೃತಿಗಳನ್ನು ಕಳುಹಿಸಬಾರದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.