ರಸ್ತೆ ಬದಿ ಕಟ್ಟೆಗೆ ಕಾರು ಡಿಕ್ಕಿ: ಇಬ್ಬರ ಸಾವು

KannadaprabhaNewsNetwork |  
Published : Jul 10, 2024, 12:38 AM IST
೯ಬಿಎಸ್ವಿ೦೧- ಬಸವನಬಾಗೇವಾಡಿಯಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಅವರ ಜಮೀನು ಹತ್ತಿರ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿರುವದು.  | Kannada Prabha

ಸಾರಾಂಶ

ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆ ಬದಿಯಲ್ಲಿರುವ ಕಟ್ಟೆಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಪಟ್ಟಣದಿಂದ ಇಂಗಳೇಶ್ವರ ಗ್ರಾಮಕ್ಕೆ ಹೋಗುವ ರಸ್ತೆಗೆ ಹೊಂದಿಕೊಂಡಿರುವ ಡಾ.ಗುಬ್ಬಾ ಜಮೀನು ಹತ್ತಿರ ಸೋಮವಾರ ರಾತ್ರಿ ನಡೆದಿದೆ.

ಇಂಗಳೇಶ್ವರ ಗ್ರಾಮದ ಪ್ರಶಾಂತ ಮಹಾದೇವಪ್ಪ ಮಿಣಜಗಿ (೨೮), ಮಲ್ಲಿಕಾರ್ಜುನ ಮಾಳಪ್ಪ ಡೋಳಗೊಂಡ (೩೦) ಮೃತ ವ್ಯಕ್ತಿಗಳು. ಇದೇ ಗ್ರಾಮದ ವಿಜಯಕುಮಾರ ಮಲಪ್ಪ ದಳವಾಯಿ, ಮಾಳಪ್ಪ ಲಗಮಣ್ಣ ತೆಲಗಿ, ರೇವಣಸಿದ್ದಪ್ಪ ಭೀಮರಾಯ ಶೇಖಣ್ಣಿ ಗಾಯಗೊಂಡಿದ್ದು, ವಿಜಯಪುರದ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೋಮವಾರ ರಾತ್ರಿ ಬಸವನಬಾಗೇವಾಡಿಯಿಂದ ಇಂಗಳೇಶ್ವರ ಗ್ರಾಮದ ಕಡೆಗೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿರುವಾಗ ಅವಘಡ ಸಂಭವಿಸಿದೆ. ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ, ಪಿಐ ವಿಜಯ ಮುರಗೊಂಡ ಭೇಟಿ ನೀಡಿ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ