ಶಿರಾಡಿಯಲ್ಲಿ ಹೊಳೆಗೆ ಬಿದ್ದ ಕಾರು

KannadaprabhaNewsNetwork |  
Published : Oct 25, 2025, 01:00 AM IST
24ಎಚ್ಎಸ್ಎನ್13 :  | Kannada Prabha

ಸಾರಾಂಶ

ಮೂಲತಃ ಶಿವಮೊಗ್ಗ ಜಿಲ್ಲೆಯ ಗೋವಿಂದ ನಾಯ್ಕ ಎಂಬುವವರು ತಮ್ಮ ಮಗನನ್ನು ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿರುವ ನವೋದಯ ವಸತಿ ಶಲೆಗೆ ಬಿಟ್ಟುಬರೆಲೆಂದು ತಮ್ಮ ಪತ್ನಿ ಹಾಗೂ ಮಗಳ ಜತೆ ಕಾರಿನಲ್ಲಿ ಹೋಗುತ್ತಿದ್ದಾಗ ಮಾರನಹಳ್ಳಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಈ ವೇಳೆ ರಸ್ತೆ ಬದಿ ತಡೆಗೋಡೆ ಕೂಡ ಇಲ್ಲದಿದ್ದರಿಂದ ಕಾರು ಸುಮಾರು 80 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಉರುಳಿದ್ದನ್ನು ಕಮಡ ಸ್ಥಳೀಯರು ಹಾಗೂ ಚಾಲಕರು ಕೂಡಲೇ ಕೆಳಗಿಳಿದು ಎಲ್ಲರನ್ನೂ ಕಾರಿನಿಂದ ಹೊರಕ್ಕೆ ಕರೆತಂದಿದ್ದಾರೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಳೆಗೆ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಾಲೂಕಿನ ಶಿರಾಡಿ ಘಾಟಿಯ ಮಾರನಹಳ್ಳಿ ಬಳಿ ನಡೆದಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ಗೋವಿಂದ ನಾಯ್ಕ ಎಂಬುವವರು ತಮ್ಮ ಮಗನನ್ನು ಬೆಳ್ತಂಗಡಿ ಬಳಿಯ ಗುರುವಾಯನಕೆರೆಯಲ್ಲಿರುವ ನವೋದಯ ವಸತಿ ಶಲೆಗೆ ಬಿಟ್ಟುಬರೆಲೆಂದು ತಮ್ಮ ಪತ್ನಿ ಹಾಗೂ ಮಗಳ ಜತೆ ಕಾರಿನಲ್ಲಿ ಹೋಗುತ್ತಿದ್ದಾಗ ಮಾರನಹಳ್ಳಿ ಬಳಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಈ ವೇಳೆ ರಸ್ತೆ ಬದಿ ತಡೆಗೋಡೆ ಕೂಡ ಇಲ್ಲದಿದ್ದರಿಂದ ಕಾರು ಸುಮಾರು 80 ಅಡಿ ಆಳದ ಹೊಂಡಕ್ಕೆ ಉರುಳಿಬಿದ್ದಿದೆ. ಇದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಉರುಳಿದ್ದನ್ನು ಕಮಡ ಸ್ಥಳೀಯರು ಹಾಗೂ ಚಾಲಕರು ಕೂಡಲೇ ಕೆಳಗಿಳಿದು ಎಲ್ಲರನ್ನೂ ಕಾರಿನಿಂದ ಹೊರಕ್ಕೆ ಕರೆತಂದಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''