ಕಾರ್‌ ಹಿಟ್‌ ಆಂಡ್‌ ರನ್‌: ಮಹಿಳೆಯರಿಗೆ ಗಂಭೀರ ಗಾಯ

KannadaprabhaNewsNetwork |  
Published : Jul 21, 2024, 01:16 AM IST
ಅಪಘಾತ | Kannada Prabha

ಸಾರಾಂಶ

ದೇವರಹಿಪ್ಪರಗಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ವೇಗವಾಗೊ ಬಂದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸಿದೇ ಪರಾರಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದೇವರಹಿಪ್ಪರಗಿ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರಿಗೆ ವೇಗವಾಗೊ ಬಂದ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ನಿಲ್ಲಿಸಿದೇ ಪರಾರಿಯಾಗಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಟಿಪ್ಪು ಸುಲ್ತಾನ್ ವೃತ್ತದ ಬಳಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಸ್ಥಳೀಯ ನಿವಾಸಿಗಳಾದ ಯಲ್ಲವ್ವ ಪರಶುರಾಮ ಗೊಲ್ಲರ(40), ಐಶ್ವರ್ಯ ರಾಮಪ್ಪ ಗೊಲ್ಲರ(16) ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ವಿಜಯಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಬ್ಬರು ಪಟ್ಟಣದ ಬಸ್ ನಿಲ್ದಾಣದಿಂದ ತಾಳಿಕೋಟೆ ರಸ್ತೆ ಮಾರ್ಗವಾಗಿ ಮನೆ ಕಡೆಗೆ ಹೋಗುವಾಗ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಕಾರು ಗುದ್ದಿದ ರಭಸಕ್ಕೆ ರಸ್ತೆಯ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿವೆ. ಭೀಕರ ರಸ್ತೆ ಅಪಘಾತವಾದರು ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದನು. ಕಾರು ಹಾಗೂ ಚಾಲಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬಳಿಕ, ದೇವರ ಹಿಪ್ಪರಗಿಯ ಕಾರ್‌ ಚಾಲಕ ರಿಯಾಜ್‌ ದುಮ್ಮದರಿ ಸೇರಿದಂತೆ ಕಾರ್‌ನ್ನು ಸ್ಥಳೀಯರು ಪತ್ತೆ ಮಾಡಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಮರು ಡಾಂಬರೀಕರಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ
ಸಕಲೇಶಪುರ ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಕಾಂತರಾಜ್‌ ಹೊನ್ನೇಕೋಡಿ ಆಯ್ಕೆ