ಸೆಪ್ಟೆಂಬರ್‌ 8ರಂದು ಕಾರ್ಡಮಮ್ ಬ್ಯಾಂಕ್ ಸುವರ್ಣ ಮಹೋತ್ಸವ

KannadaprabhaNewsNetwork |  
Published : Sep 06, 2024, 01:12 AM IST
5ಎಚ್‌ವಿಆರ್‌1 | Kannada Prabha

ಸಾರಾಂಶ

ಇಲ್ಲಿಯ ದಿ. ಕಾರ್ಡಮಮ್ ಮರ್ಚಂಟ್ಸ್ ಕೋ-ಆಪ್ ಬ್ಯಾಂಕ್‌ ಲಿ. ೫೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಹುಕ್ಕೇರಿಮಠ ಶ್ರೀಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. ೮ರಂದು ಬೆಳಗ್ಗೆ ೧೧ಕ್ಕೆ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ ಎಂದು ಬ್ಯಾಂಕಿನ್‌ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಗಂಗಾಧರ ಮಳಗಿ ಹೇಳಿದರು.

ಹಾವೇರಿ: ಇಲ್ಲಿಯ ದಿ. ಕಾರ್ಡಮಮ್ ಮರ್ಚಂಟ್ಸ್ ಕೋ-ಆಪ್ ಬ್ಯಾಂಕ್‌ ಲಿ. ೫೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಹುಕ್ಕೇರಿಮಠ ಶ್ರೀಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. ೮ರಂದು ಬೆಳಗ್ಗೆ ೧೧ಕ್ಕೆ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ ಎಂದು ಬ್ಯಾಂಕಿನ್‌ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಗಂಗಾಧರ ಮಳಗಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು ಹುಕ್ಕೇರಿಮಠದ ಮಠಾಧ್ಯಕ್ಷ ಸದಾಶಿವ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಗಂಗಾಧರ ಮಳಗಿ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ವಿಧಾನಸಭೆ ಉಪ ಸಭಾಧ್ಯಕ್ಷ ಹಾಗೂ ಶಾಸಕ ರುದ್ರಪ್ಪ ಲಮಾಣಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಹಕಾರ ಇಲಾಖೆಯ ಉಪನಿಬಂಧಕ ಎ.ಯು. ಖಾನ್ ಪಾಲ್ಗೊಳ್ಳಲಿದ್ದಾರೆ ಎಂದರು.

ಕಾರ್ಡ್‌ಮಮ್ ಬ್ಯಾಂಕ್ ೩೨೦೦ ಸದಸ್ಯರನ್ನು ಹೊಂದಿದ್ದು, ಸುವರ್ಣ ಮಹೋತ್ಸವ ಅಂಗವಾಗಿ ತನ್ನೆಲ್ಲ ಸದಸ್ಯರಿಗೆ ಬೆಳ್ಳಿ ನಾಣ್ಯ ವಿತರಿಸುತ್ತಿದೆ. ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಕೂಡ ಪರಿಚಯಿಸಲಾಗುತ್ತಿದ್ದು, ಗ್ರಾಹಕರಿಗೆ ಬ್ಯಾಂಕಿನ ವಹಿವಾಟು ಸರಳೀಕರಿಸಲಾಗುತ್ತಿದೆ ಎಂದು ತಿಳಿಸಿದರು.

ಬ್ಯಾಂಕಿನ ಉಪಾಧ್ಯಕ್ಷ ಮಹಾಂತೇಶ ಸುರಳಿಹಳ್ಳಿ, ನಿರ್ದೇಶಕರಾದ ವಿರೂಪಾಕ್ಷಪ್ಪ ಬಣಕಾರ, ಅಶೋಕ ಮಹಾರಾಜಪೇಟ, ಮಹಾಂತಪ್ಪ ಮಾಸೂರ, ಮಲ್ಲಿಕಾರ್ಜುನ ಹಂದ್ರಾಳ, ಡಾ. ಸಿದ್ದೇಶ್ವರ ಬಾಲೆಹೊಸೂರ, ವಿರೂಪಾಕ್ಷಪ್ಪ ಹತ್ತಿಮತ್ತೂರ, ವಿರೂಪಾಕ್ಷ ಹಾವನೂರ, ಕುಶಾಲ ನರಗುಂದ, ಹನುಮಂತಪ್ಪ ಹೊಸಮನಿ, ವ್ಯವಸ್ಥಾಪಕ ಮಹಾಂತಸ್ವಾಮಿ ಪ್ಯಾಟಿಮಠ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ