ವಿಕಲ ಚೇತನರ ಆರೈಕೆ ಸುಲಭ ಅಲ್ಲ

KannadaprabhaNewsNetwork |  
Published : Nov 04, 2025, 01:02 AM IST
ಚಿತ್ರದುರ್ಗ ಎರಡನೇ ಪುಟದ ಟಿಂಟ್ ಬಾಟಂ   | Kannada Prabha

ಸಾರಾಂಶ

ಚಿತ್ರದುರ್ಗ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಹಾಗೂ ಆರೈಕೆದಾರರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್ ಉದ್ಘಾಟಿಸಿದರು.

ಕನ್ಡಡಪ್ರಭ ವಾರ್ತೆ ಚಿತ್ರದುರ್ಗ

ವಿಕಲಚೇತನರು ಹಾಗೂ ಮಾನಸಿಕ ತೊಂದರೆಗೊಳಗಾದವರ ಆರೈಕೆ ಸುಲಭವಾದುದಲ್ಲ, ಇದಕ್ಕಾಗಿ ಪೋಷಕರು ಹಾಗೂ ಆರೈಕೆದಾರರು ತಮ್ಮ ವೈಯಕ್ತಿಕ ಜೀವನದ ಹೆಚ್ಚಿನ ಸಮಯವನ್ನು ಮುಡಿಪಾಗಿಸಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಹೆಚ್.ವಿಜಯ್ ಕುಮಾರ್ ಹೇಳಿದರು.

ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಆರೈಕೆದಾರರ ದಿನಾಚರಣೆ ಹಾಗೂ ಆರೈಕೆದಾರರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸದೃಢ ಆರೈಕೆದಾರರು ಸದೃಢ ಸಮಾಜ ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ ಆರೈಕೆದಾರರ ದಿನ ಆಚರಿಸಲಾಗುತ್ತಿದೆ ವಿಕಲಚೇತನ ಮಕ್ಕಳನ್ನು ಆರೈಕೆ ಮಾಡುತ್ತಿರುವವರಿಗೆ ಆರೈಕೆದಾರರ ಭತ್ಯೆ ಯೋಜನೆಯನ್ನು ಕಳೆದ ವರ್ಷದಿಂದ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಪ್ರಾದೇಶಿಕ ಸಂಪನ್ಮೂಲ ಕೇಂದ್ರ ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಷೇಕ್ ಯಾಸೀನ್ ಷರೀಪ್ ಮಾತನಾಡಿ, ವಿಕಲಚೇತನರನ್ನು ನೋಡಿಕೊಳ್ಳುವಾಗ ತಾಳ್ಮೆ, ಸಹನೆ, ಭರವಸೆಯನ್ನು ಆರೈಕೆದಾರರು ಹೊಂದಿರಬೇಕಾಗುತ್ತದೆ. ಅತೀ ಚಿಕ್ಕ ವಯಸ್ಸಿನಲ್ಲಿಯೇ ತೊಂದರೆಯನ್ನು ಪೋಷಕರು ಗುರುತಿಸಿದಲ್ಲಿ ಮುಂದೆ ಆಗುವ ದೊಡ್ಡ ತೊಂದರೆಯನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿ, ಆರೈಕೆದಾರರಿಗೆ ಕೆಲವು ನಿರ್ವಹಣಾ ಕೌಶಲ್ಯಗಳನ್ನು ವಿವರಿಸಿದರು.

ಬೆಂಗಳೂರು ಎಪಿಡಿ ಸಂಸ್ಥೆ ಕ್ಲಿನಿಕಲ್ ಸೈಕಾಲಜಿಸ್ಟ್ ಸುಪ್ರಜಾ ಅವರು 21 ವಿಧಧ ವಿಕಲತೆಗಳ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತಾವಿಕ ಮಾತನಾಡಿದರು. ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕ ರಾಜೀವ್, ಎಪಿಡಿ ಸಂಸ್ಥೆಯ ನಂದಿನಿ, ಆರೈಕೆದಾರರ ಸಂಘದ ಅಧ್ಯಕ್ಷೆ ಅನ್ನಪೂರ್ಣ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೇಖಕ ತನ್ನನ್ನು ತಾನು ವಿಮರ್ಶೆಗೊಳಪಡಿಸಿಕೊಳ್ಳಬೇಕು
ಕುಂದಾನಗರಿಯಲ್ಲಿ ಬೆಳಗಾವಿ ಉತ್ಸವ