ವ್ಯಂಗ್ಯಚಿತ್ರಗಳು ನಗಿಸಿ, ಯೋಚಿಸುವಂತೆ ಮಾಡುತ್ತವೆ: ಫಾ.ಲೋಬೋ

KannadaprabhaNewsNetwork |  
Published : Oct 27, 2025, 12:30 AM IST
26ವ್ಯಂಗ್ಯವ್ಯಂಗ್ಯ ಚಿತ್ರಕಲಾ ಕಾರ್ಯಾಗಾರವನ್ನು ಫಾ.ಸುನಿಲ್ ಲೋಬೋ ಉದ್ಘಾಟಿಸಿದರು | Kannada Prabha

ಸಾರಾಂಶ

ಮಣಿಪಾಲ ತ್ರಿವರ್ಣ ಆರ್ಟ್ ಕ್ಲಾಸಸ್ ವತಿಯಿಂದ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಒಂದು ದಿನದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರ ನಡೆಯಿತು.

ತ್ರಿವರ್ಣ ಆರ್ಟ್‌ ನಿಂದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರ: ಚಿತ್ರಕಲಾ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಮಣಿಪಾಲ

ವ್ಯಂಗ್ಯಚಿತ್ರಗಳು ಹಾಸ್ಯದ ಕಣ್ಣಿನಲ್ಲಿ ಜೀವನವನ್ನು ನೋಡುವ ಕಲೆಯಾಗಿದೆ. ವ್ಯಂಗ್ಯಚಿತ್ರ ನಮ್ಮನ್ನು ನಗಿಸುವುದರೊಂದಿಗೆ ಆಳವಾಗಿ ಚಿಂತಿಸುವಂತೆಯೂ ಮಾಡುತ್ತದೆ. ನಮ್ಮನ್ನು ಸೃಜನಾತ್ಮಕವಾಗಿ ಯೋಚಿಸಲು, ಜೀವನದ ಹಗುರವಾದ ಬದಿಯನ್ನು ಕಾಣಲು ಮತ್ತು ಸರಳ ಚಿತ್ರಗಳಲ್ಲಿ ದೊಡ್ಡ ಸಂದೇಶ ನೀಡಲು ಕಲಿಸುತ್ತದೆ ಎಂದು ಪೆರಂಪಳ್ಳಿ ಟ್ರಿನಿಟಿ ಸೆಂಟ್ರಲ್ ಸ್ಕೂಲಿನ ಪ್ರಾಂಶುಪಾಲ ರೆ.ಫಾ.ಡೊಮೆನಿಕ್ ಸುನಿಲ್ ಲೋಬೋ ಹೇಳಿದ್ದಾರೆ.ಅವರು ಭಾನುವಾರ ಇಲ್ಲಿನ ತ್ರಿವರ್ಣ ಆರ್ಟ್ ಕ್ಲಾಸಸ್ ವತಿಯಿಂದ ಆಯೋಜಿಸಲಾದ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮತ್ತು ಒಂದು ದಿನದ ವ್ಯಂಗ್ಯ ಚಿತ್ರಕಲಾ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತಿದ್ದರು.ಕಲೆ ಎಂಬುದು ಭಾಷೆ, ಸಂಸ್ಕೃತಿ, ವಯಸ್ಸು ಮೀರಿ ಮನಸ್ಸನ್ನು ಸಂಪರ್ಕಿಸುತ್ತದೆ. ಕಲೆ ನಮ್ಮ ಮನದಾಳದ ಭಾವನೆ, ಸಂತೋಷ, ಆನಂದ, ಕೃತಜ್ಞತೆ, ದುಃಖವನ್ನು ಶಬ್ದಗಳಿಗಿಂತ ಹೆಚ್ಚಾಗಿ ವ್ಯಕ್ತಪಡಿಸುತ್ತದೆ. ಕಲೆಯು ಸೃಜನಶೀಲತೆಯ ದಾರಿಯಾಗಿದೆ ಎಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ಹಿರಿಯ ವ್ಯಂಗ್ಯ ಚಿತ್ರಕಾರರಾದ ಜೇಮ್ಸ್ ವಾಜ್ ಮತ್ತು ಜೀವನ್ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನಮ್ಮೂರು ಚಿತ್ರಕಲಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ತ್ರಿವರ್ಣ ಆರ್ಟ್ ಕ್ಲಾಸಸ್‌ನ ನಿರ್ದೇಶಕ, ಕಲಾವಿದ ಹರೀಶ್ ಸಾಗಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಣತಿ ಬಿ. ಶೆಟ್ಟಿ ವಂದಿಸಿದರು. ಶ್ರೀಲತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.ವ್ಯಂಗ್ಯಚಿತ್ರಕಾರರಾದ ಜೇಮ್ಸ್ ವಾಜ್ ಮತ್ತು ಜೀವನ್ ಶೆಟ್ಟಿ ಪ್ರಾತ್ಯಕ್ಷಿಕೆ, ರಚನಾ ಕ್ರಮ, ಪ್ರದರ್ಶನದ ಮೂಲಕ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಈ ಕಾರ್ಯಾಗಾರದಲ್ಲಿ ಮಕ್ಕಳು, ಹಿರಿಯರು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.

PREV

Recommended Stories

ವಾಲ್ಮೀಕಿಗೆ ದೇವರ ಪಟ್ಟ ಕೊಡದಿರುವುದು ದುರಂತ: ಡಾ.ಗೋಪಾಲ
ಚರ್ಚ್‌ನಲ್ಲಿ ನಡೆದಿರುವುದು ಆತ್ಮಹತ್ಯೆಯಲ್ಲ, ಕೊಲೆ: ಆರೋಪ