ಪ್ರಭಾಕರ ಭಟ್ ವಿರುದ್ಧ ಕೇಸು-ಹಿಂದೂ ಮುಖಂಡರ ದನಿ ಹತ್ತಿಕ್ಕುವ ಪ್ರಯತ್ನ: ಯಶ್ಪಾಲ್‌

KannadaprabhaNewsNetwork |  
Published : Oct 28, 2025, 12:33 AM IST
32 | Kannada Prabha

ಸಾರಾಂಶ

ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ನಾಯಕರ ದನಿ ಹತ್ತಿಕ್ಕಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೇಸು ದಾಖಲಿಸುವ ಮೂಲಕ ರಾಷ್ಟ್ರೀಯವಾದಿ ಚಿಂತನೆಯ ಹಿಂದೂ ನಾಯಕರ ದನಿ ಹತ್ತಿಕ್ಕಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರ್.ಎಸ್.ಎಸ್. ಶತಮಾನೋತ್ಸವದಿಂದ ಹತಾಶಗೊಂಡಿರುವ ಕಾಂಗ್ರೆಸ್ ಸರ್ಕಾರ ಸಂಘಟನೆ ಹಾಗೂ ಮುಖಂಡರನ್ನು ಟಾರ್ಗೆಟ್ ಮಾಡಿ ಅಲ್ಪಸಂಖ್ಯಾತರನ್ನು ಓಲೈಕೆಗಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಸುಳ್ಳು ಕೇಸು ದಾಖಲಿಸಿದೆ.ಈ ಹಿಂದೆ 2018ರಲ್ಲಿ ರಾಜಕೀಯ ದ್ವೇಷಕ್ಕಾಗಿ ಕಲ್ಲಡ್ಕ ಪ್ರಭಾಕರ ಭಟ್ ಆಡಳಿತದ ಶಾಲೆಯ ವಿದ್ಯಾರ್ಥಿಗಳ ಬಿಸಿಯೂಟ ಅನುದಾನ ತಡೆ ಮಾಡಿದ್ದ ಅಂದಿನ ಸಿದ್ದರಾಮಯ್ಯ ಸರ್ಕಾರ ಇದೀಗ ಮತ್ತೊಮ್ಮೆ ಸುಳ್ಳು ಕೇಸು ದಾಖಲಿಸುವ ಮೂಲಕ ದೌರ್ಜನ್ಯ ನಡೆಸಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯಿಂದ ಹಿಂದೂ ಸಂಘಟನೆಯ ಮುಖಂಡರು ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ನಿರಂತರವಾಗಿ ಮಾಡುತ್ತಿದ್ದು, ಲಕ್ಷಾಂತರ ಹಿಂದೂ ಕಾರ್ಯಕರ್ತರ ಮಾರ್ಗದರ್ಶಕರಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಹಾಕಿರುವ ಸುಳ್ಳು ಕೇಸುಗಳನ್ನು ತಕ್ಷಣ ಹಿಂಪಡೆಯಬೇಕು, ತಪ್ಪಿದಲ್ಲಿ ಮುಂದಾಗುವ ಅನಾಹುತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗಲಿದೆ ಎಂದು ಯಶ್‌ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''