ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನ ವಶಕ್ಕೆ

KannadaprabhaNewsNetwork |  
Published : Oct 22, 2025, 01:03 AM IST
57 | Kannada Prabha

ಸಾರಾಂಶ

ಮೈಸೂರು ತಾಲೂಕಿನ ಜಯಪುರ ಪೊಲೀಸರಿಗೆ ಅಕ್ರಮವಾಗಿ ಜಾನುವಾರುಗಳನ್ನ ಸಾಗಿಸುತ್ತಿರುವ ಮಾಹಿತಿ

ಕನ್ನಡಪ್ರಭ ವಾರ್ತೆ ನಂಜನಗೂಡು

ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ಸಿನಮೀಯ ಶೈಲಿಯಲ್ಲಿ ಚೇಸ್ ಮಾಡಿ ರಕ್ಷಿಸಿರುವ ಘಟನೆ ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಜಯಪುರ ಪೊಲೀಸರಿಗೆ ಅಕ್ರಮವಾಗಿ ಜಾನುವಾರುಗಳನ್ನ ಸಾಗಿಸುತ್ತಿರುವ ಮಾಹಿತಿ ಬಂದಿದ್ದು, ಪಿಎಸ್‌ಐ ಹೇಮಾವತಿ ಅವರು ವಾಹನವನ್ನು ಸಿನಮೀಯ ಶೈಲಿಯಲ್ಲಿ ಚೇಸ್ ಮಾಡಿದ್ದಾರೆ. ಅತಿ ವೇಗದಿಂದ ಚಾಲನೆ ಮಾಡುತ್ತಿದ್ದ ಖದೀಮರು ಹುಲ್ಲಹಳ್ಳಿ ರಸ್ತೆ ಕಡೆಗೆ ತಿರುಗಿದ್ದಾರೆ. ಕೂಡಲೇ ಹೇಮಾವತಿ ಅವರು ಹುಲ್ಲಹಳ್ಳಿ ಪಿಎಸ್ಸೈ ಚೇತನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಲರ್ಟ್ ಆದ ಚೇತನ್ ಕುಮಾರ್ ಸಹ ಸಿಬ್ಬಂದಿಗಳ ಸಮೇತ ಜಾನುವಾರುಗಳನ್ನ ಸಾಗಿಸುತ್ತಿದ್ದ ವಾಹನ ಹಿಡಿಯಲು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಈ ವೇಳೆ ಅಹಲ್ಯಾ ಗ್ರಾಮದ ಬಳಿ ಜಾನುವಾರುಗಳನ್ನ ತುಂಬಿದ್ದ ವಾಹನ ಪಲ್ಟಿಯಾಗಿದೆ. ಈ ವೇಳೆ ವಾಹನದಲ್ಲಿದ್ದ ವ್ಯಕ್ತಿಗಳು ಪರಾರಿಯಾಗಿದ್ದಾರೆ.

ಪೊಲೀಸರು ಸ್ಥಳಕ್ಕೆ ಬಂದಾಗ ವಾಹನದಲ್ಲಿದ್ದ ಕರುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯ ಕಂಡು ಬಂದಿದೆ. ಕೂಡಲೇ ಸ್ಥಳೀಯರ ಸಹಾಯದಿಂದ 20 ಕರುಗಳನ್ನು ರಕ್ಷಿಸಿ ಪಿಂಜರಾಪೋಲ್ ಗೆ ರವಾನಿಸಿ ಬೊಲೆರೋ ವಾಹನ ವಶಪಡಿಸಿಕೊಂಡಿದ್ದಾರೆ. ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರೋಗ್ಯ ವ್ಯವಸ್ಥೆಯೇ ರಾಜ್ಯದಲ್ಲಿ ಸ್ತಬ್ಧವಾಗುವ ಆತಂಕ
ರಾಜ್ಯಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಕ್ಕಟ್ಟು : ಲಾರಿ ಮಾಲಿಕರಿಗೆ ಸಂಕಷ್ಟ