ಕನ್ನಡಪ್ರಭ ವಾರ್ತೆ ಮಂಗಳೂರು
ಈ ಹಿಂದೆ ಬಾವುಟಗುಡ್ಡೆಯಲ್ಲಿ ಮೂಲ್ಕಿ ಸುಂದರರಾಮ್ ಶೆಟ್ಟಿ ರಸ್ತೆಗೆ ಹೆಸರಿಡುವ ವಿಚಾರದಲ್ಲಿ ಕಾಂಗ್ರೆಸ್ನವರು ಅಲೋಶಿಯಸ್ ಶಾಲಾ ವಿದ್ಯಾರ್ಥಿಗಳನ್ನು ಕೂರಿಸಿ ಪ್ರತಿಭಟನೆ ನಡೆಸಿದ್ದರು. ಆಗ ಶಾಸಕರು ಪ್ರತಿಭಟನೆಯ ನೇತೃತ್ವ ವಹಿಸಿದ್ದರೂ ಯಾವ ಕೇಸು ದಾಖಲಾಗಿರಲಿಲ್ಲ. ಇದನ್ನು ನಾವು ಖಂಡಿಸುತ್ತೇವೆ ಎಂದರು. ಜನಪ್ರತಿನಿಧಿಗಳ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾಂಗ್ರೆಸ್ ಮತಬ್ಯಾಂಕ್ಗಾಗಿ ತುಷ್ಠೀಕರಣ ನೀತಿ ಅನುಸರಿಸುತ್ತಿದೆ. ರಾಮನ ವಿರುದ್ಧ ಮಾತನಾಡಿದವರ ಮೇಲೆ ಕ್ರಮ ಕೈಗೊಳ್ಳದೆ, ಮಕ್ಕಳಲ್ಲಿ ಕೋಮುಭಾವನೆ ಕೆರಳಿಸಿದ ವೃಥಾ ಆರೋಪ ಹೊರಿಸುತ್ತಿದೆ ಎಂದರು.ಮಂಗಳೂರಿನ ಖಾಸಗಿ ಶಾಲೆಯಲ್ಲಿ ನಡೆದಿರುವುದು ಬಿಜೆಪಿ ವರ್ಸಸ್ ಕಾಂಗ್ರೆಸ್ ಅಲ್ಲ, ಹಿಂದು-ಕ್ರೈಸ್ತ ನಡುವಿನ ಕೋಮು ಭಾವನೆಯ ಹೋರಾಟವೂ ಅಲ್ಲ. ಹಿಂದು ದೇವರ ನಿಂದನೆಗೆ ಶಿಕ್ಷಕಿ ವಿರುದ್ಧ ಪೋಷಕರು, ಹೆತ್ತವರು ನಡೆಸಿದ ಹೋರಾಟಕ್ಕೆ ಶಾಸಕರು ಬೆಂಗಾವಲಾಗಿ ಹೋಗಿದ್ದಾರೆ ಅಷ್ಟೆ. ರಾಮ ವಿರೋಧಿ ಶಿಕ್ಷಕಿಯ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು. ಶಾಲೆಯಲ್ಲಿ ಬಿಜೆಪಿ ರಾಜಕೀಯಕ್ಕೆ ಮಕ್ಕಳನ್ನು ಬಳಸಿಲ್ಲ. ಅದು ಬಿಜೆಪಿ ಅಥವಾ ಹಿಂದು ಸಂಘಟನೆಗಳು ಕೈಗೆತ್ತಿಕೊಂಡ ಹೋರಾಟ ಅಲ್ಲ. ಪೋಷಕರು ಹಾಗೂ ಹೆತ್ತವರು ಹೋರಾಟ ನಡೆಸಿದ್ದು, ನಾನೂ ಇದ್ದರೆ ಅದರಲ್ಲಿ ಭಾಗವಹಿಸುತ್ತಿದ್ದೆ. ಶಾಸಕರು ಅಲ್ಲಿಂದಲೇ ಅಧಿಕಾರಿಗಳು, ಸರ್ಕಾರದ ಜತೆ ಮಾತನಾಡಿದ್ದಾರೆ. ರಾಮನ ಅವಹೇಳನ ಮಾಡುವುದನ್ನು ಎಷ್ಟು ಮಾತ್ರಕ್ಕೂ ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕಾನೂನಾತ್ಮಕ ಹಾಗೂ ಬೀದಿಗಿಳಿದು ಹೋರಾಟ ನಡೆಸುವುದಾಗಿ ನಳಿನ್ ಕುಮಾರ್ ಹೇಳಿದರು. -----------------