ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಜಿಪಂ ಸಭಾಂಗಣದಲ್ಲಿ ಗುರುವಾರ ಸೆ.1 ರಿಂದ ಡಿಸೆಂಬರ್ 31ರವರೆಗೆ ನಡೆಯಲಿರುವ 21ನೇ ರಾಷ್ಟ್ರೀಯ ಜಾನುವಾರು ಗಣತಿ ಕಾರ್ಯಗಾರದಲ್ಲಿ ಮಾತನಾಡಿದರು.
21ನೇ ಜಾನುವಾರು ಗಣತಿ ಸೆಪ್ಟೆಂಬರ್ 1ಕ್ಕೆ ದೇಶಾದ್ಯಂತ ಆರಂಭಗೊಂಡು ಡಿಸೆಂಬರ್-31ರವರೆಗೆ ಚಾಲ್ತಿಯಲ್ಲಿದೆ. ಇದುವರೆಗೆ ಪುಸ್ತಕದಲ್ಲಿ ಗಣತಿ ಮಾಹಿತಿ ನಮೂದಿಸಲಾಗುತ್ತಿತ್ತು. ಆದರೆ, ಮೊದಲ ಬಾರಿಗೆ ಸ್ಮಾರ್ಟ್ಪೋನ್ ಬಳಸಿ ಮನೆ ಮನೆಗೆ ತೆರಳಿ ಗಣತಿಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಪಶು ಸಂಗೋಪನಾ ಇಲಾಖೆಯಿಂದಲೇ 21ಸ್ಟ್ ಲೈವ್ಸ್ಪಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಗಣತಿದಾರರು ಆ್ಯಪ್ ಬಳಸಿ ಮಾಹಿತಿ ಪಡೆದು ಗಣತಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.ಗಣತಿ ಕಾರ್ಯದಲ್ಲಿ ಯಾವುದೇ ದತ್ತಾಂಶ ಸಂಗ್ರಹಣೆಯಲ್ಲಿ ಲೋಪದೋಷ ಆಗಬಾರದು. ಜಾನುವಾರುಗಳಿಗೆ ವ್ಯಾಕ್ಸಿನ್, ಔಷಧಿಗಳ ಬಳಕೆ ಬಗ್ಗೆ ಸಮಗ್ರ ಮಹಿಸಿ ನೀಡಬೇಕು ಎಂದು ಸಲಹೆ ನೀಡಿದರು.
1919 ರಿಂದ ಜಾನುವಾರು ಗಣತಿ ನಡೆಯುತ್ತ ಬಂದಿದೆ. ಕಳೆದ 100 ವರ್ಷಗಳಲ್ಲಿ 20 ಗಣತಿ ನಡೆದಿವೆ. ಇದು 21ನೇ ಜಾನುವಾರು ಗಣತಿಯಾಗಿದೆ. ಈ ಹಿಂದೆ ಪುಸ್ತಕದಲ್ಲಿ 200 ಕಾಲಂ ಭರ್ತಿ ಮಾಡಬೇಕಾಗಿತ್ತು. ಈ ಬಾರಿ ಚುಟುಕಾಗಿ ಆ್ಯಪ್ ಮೂಲಕ ಮಾಹಿತಿ ನಮೂದಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆ್ಯಪ್ ನೆಟ್ವರ್ಕ್ ಪ್ರದೇಶಕ್ಕೆ ಬರುತ್ತಿದ್ದಂತೆಯೇ ಕೇಂದ್ರ ಸರ್ವರ್ ಜತೆ ಮಾಹಿತಿ ಹಂಚಿಕೊಳ್ಳುವಂತೆ ವಿನ್ಯಾಸ ಪಡಿಸಲಾಗಿದೆ. ಎಣಿಕೆದಾರರಿಗೆ ಮತ್ತು ಮೇಲ್ವಿಚಾರಕರಿಗೆ ಪ್ರತ್ಯೇಕವಾದ ಯುಸರ ಐಡಿ ಮತ್ತು ಪಾಸ್ ವರ್ಡ್ ನೀಡಲಾಗುವುದು ಎಂದರು.
ಗೋಶಾಲೆ ಮಾಹಿತಿ ಪಡೆಯಲು ನಿರ್ದೇಶನ: ಜಾನುವಾರು ಸಾಕಾಣಿಕೆದಾರರು ಸಾಕಿರುವ ದನ, ಎತ್ತು, ಎಮ್ಮೆ, ಕೋಣ, ಆಡು, ಕುರಿ, ಕೋಳಿ, ನಾಯಿ, ಕುದುರೆ, ಹಂದಿ ಬಾತುಕೋಳಿ ಹಾಗೂ ಎಮು ಹಕ್ಕಿಗಳ ಮಾಹಿತಿ ಪಡೆಯಬೇಕು. ಮಾಲೀಕರಿಲ್ಲದ ದನಕರುಗಳು, ನಾಯಿಗಳ ಮಾಹಿತಿಯನ್ನೂ ಸಹ ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಆನೆ, ದನ ಸಾಕುವುದಿದ್ದರೆ, ಗೋಶಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10ಕ್ಕಿಂತ ಜಾಸ್ತಿ ದನಗಳಿದ್ದರೆ, 1,000ಕ್ಕೂ ಅಧಿಕ ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಣೆಯಿದ್ದರೆ ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸಿಕೊಳ್ಳಬೇಕು ಎಂದು ತಿಳಿಯಲಾಗಿದೆ ಎಂದು ಹೇಳಿದರು.
ಕೈಪಿಡಿ- ಮಾಹಿತಿ ಪುಸ್ತಕ ಬಿಡುಗಡೆ: ಇದೇ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ರಾಜೀವ ಕುಲೇರ್, ಮಾಹಿತಿ ಕೈಪಿಡಿ, ಪೋಸ್ಟರ್ ಬ್ಯಾನರ್ ಹಾಗೂ ಗಣತಿ ಕಾರ್ಯದಲ್ಲಿ ಮನೆಗಳಿಗೆ ಅಂಟಿಸುವ ಸ್ಟಿಕರ್ ಬಿಡುಗಡೆ ಮಾಡಿದರು.