ಕನ್ನಡ ರಾಜ್ಯ, ಭಾಷೆ ಗುರುತಿಸಲು ರಾಜ್‌ ಶ್ರಮ ಕಾರಣ: ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಪುಟ್ಟಣ್ಣಗೋಕಾಕ್

KannadaprabhaNewsNetwork |  
Published : Apr 25, 2024, 01:02 AM IST
24ಎಚ್ಎಸ್ಎನ್5 : ಚನ್ನರಾಯಪಟ್ಟಣದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದಂದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಹಿ ಹಂಚಲಾಯಿತು. | Kannada Prabha

ಸಾರಾಂಶ

ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅದ್ಧೂರಿ ಡಾ.ರಾಜ್‌ಕುಮಾರ್‌ ಹುಟ್ಟುಹಬ್ಬ

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ದೇಶದಲ್ಲಿ ಕನ್ನಡ ರಾಜ್ಯ ಹಾಗೂ ಭಾಷೆಯನ್ನು ಗುರುತಿಸುತ್ತಿದ್ದಾರೆ ಎಂದರೆ ಡಾ.ರಾಜ್‌ಕುಮಾರ್‌ರವರ ಹೋರಾಟಗಳು ಹಾಗೂ ಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದು ತಾಲೂಕು ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಪುಟ್ಟಣ್ಣಗೋಕಾಕ್ ತಿಳಿಸಿದರು.

ಪಟ್ಟಣದ ಬಿ.ಎಂ.ರಸ್ತೆಯ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಬುಧವಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ‘ಕನ್ನಡ ನಾಡು ನುಡಿ ಜಲದ ವಿಚಾರದಲ್ಲಿ ಎಂದೂ ರಾಜಿಯಾಗದೆ ಹೋರಾಟದ ಬದುಕಿನಲ್ಲಿ ಬಂದ ರಾಜ್‌ಕುಮಾರ್ ಸಿನಿಮಾ ರಂಗದಲ್ಲಿ ಮೇರು ನಟರಾಗಿ, ಮಾಣಿಕ್ಯದಂತೆ ಮಿನುಗುವ ನಕ್ಷತ್ರವಾಗಿದ್ದಾರೆ. ಅವರ ಸರಳತೆ, ವಿನಯತೆ ಮುಂದಿನ ಪೀಳಿಗೆಗೆ ಆದರ್ಶಮಯವಾಗಿದ್ದು ಚಿತ್ರರಂಗದಲ್ಲಿ ಅವರ ನಟನೆ ಅವರ ಸ್ಫೂರ್ತಿದಾಯಕ ಚಿತ್ರಗಳು ಎಷ್ಟೋ ಜನರ ಬದುಕನ್ನು ಬದಲಿಸಿ ಉತ್ತಮ ಜೀವನ ನಡೆಸಲು ಮಾದರಿಯಾಗಿವೆ. ಅವರ ಬದುಕೇ ನಮಗೆಲ್ಲರಿಗೂ ಆದರ್ಶಮಯವಾಗಿದೆ’ ಎಂದು ಹೇಳಿದರು.

‘ಪಟ್ಟಣದಲ್ಲಿ ಒಂದು ಉತ್ತಮವಾದ ಡಾ.ರಾಜ್‌ಕುಮಾರ್ ಧಾಮವನ್ನು ನಿರ್ಮಾಣ ಮಾಡಲಾಗಿದ್ದು ನಮ್ಮ ಸಂಘದವರ ಹಾಗೂ ಜನಪ್ರತಿನಿಧಿಗಳ ಮತ್ತು ಸಾರ್ವಜನಿಕರ ಸಹೋಗದಲ್ಲಿ ರಾಜ್‌ಕುಮಾರ್‌ರವರ ಸುಪುತ್ರಿ ಲಕ್ಷ್ಮಿಗೋವಿಂದರಾಜ್ ರವರ ಹಸ್ತದಲ್ಲಿ ಉದ್ಘಾಟನೆಯಾಗಿದೆ. ತಾಲೂಕಿನಲ್ಲಿಯೇ ಒಂದು ಮಾದರಿ ಕೆಲಸ ಮಾಡಿರುವ ಆತ್ಮತೃಪ್ತಿ ನಮಗಿದೆ. ಇದಕ್ಕೆಲ್ಲ ನಗುಮುಖದ ಪವರ್‌ಸ್ಟಾರ್ ಪುನಿತ್‌ರಾಜ್‌ಕುಮಾರ್ ಮಾದರಿಯಾಗಿದ್ದಾರೆ’ ಎಂದು ತಿಳಿಸಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಸಿ.ಜಿ.ರವಿ ಹಾಗೂ ಶಂಕರಾಚಾರ್ ಮಾತನಾಡಿ, ಲೋಕಸಭಾ ಚುನಾವಣೆ ಇರುವುದರಿಂದ ಈ ವರ್ಷ ಡಾ.ರಾಜ್‌ಕುಮಾರ್‌ರವರ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದ್ದು ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಪ್ರಾರ್ಥಿಸಲಾಗಿದೆ. ಜನರು ಕಡ್ಡಾಯವಾಗಿ ಮತದಾನ ಮಾಡಿ ಮತದಾನ ನಿಮ್ಮ ಹಕ್ಕು ಯಾವುದೇ ವ್ಯಕ್ತಿಗಾದರೂ ಮತದಾನ ಮಾಡಿ, ಇಲ್ಲ ಅಂದರೂ ನೋಟಾಗೆ ಒತ್ತಿ ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ತಿಳಿಸಿದರು.

ಡಾ.ರಾಜ್‌ಕುಮಾರ್‌ರವರ ಭಾವಚಿತ್ರಕ್ಕೆ ಸಂಘದ ಸದಸ್ಯರು ಪುಷ್ಪನಮನ ಸಲ್ಲಿಸಿ ಕೇಕ್ ಕತ್ತರಿಸಿ ಸಿಹಿ ಹಂಚಿದರು.

ಶ್ರೀವಿನಾಯಕ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಮುಖಂಡರಾದ ರುದ್ರೇಶ್, ತೀರ್ಥ, ಸ್ವಾಮಿ, ರಾಜ್‌ಕುಮಾರ್ ಸಂಘದ ಗೌರವಾಧ್ಯಕ್ಷ ರೇವಣ್ಣ, ಕಾರ್ಯದರ್ಶಿ ಮಹೇಶ್, ದಿನೇಶ್, ಪುರುಷೋತ್ತಮ್, ರಾಮಚಂದ್ರು, ಶಾಂತರಾಜ್, ಯುವರಾಜ್‌ಕುಮಾರ್ ಸಂಘದ ಅಧ್ಯಕ್ಷ ತೇಜಸ್, ಮುತ್ತಣ್ಣ ಮತ್ತಿತರಿದ್ದರು.

ಚನ್ನರಾಯಪಟ್ಟಣದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿ ಡಾ.ರಾಜ್‌ಕುಮಾರ್ ರವರ ಹುಟ್ಟುಹಬ್ಬದಂದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಿಹಿ ಹಂಚಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!