ವಿಜಯಪುರಕ್ಕೆ ಕಾವೇರಿ ನೀರು: ಜಪಾನ್ ''ಜೈಕಾ'' ತಂಡ ಭೇಟಿ

KannadaprabhaNewsNetwork |  
Published : Apr 25, 2026, 01:30 AM IST
ವಿಜೆಪಿ ೨೪ವಿಜಯಪುರ  ಪಟ್ಟಣದ ಪುರಸಭೆ,ಹಾಗೂ ಪಟ್ಟಣದ ಹಲವೆಡೆ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆಯ (JICA)  ತಜ್ಞರ ತಂಡ ಪಟ್ಟಣಕ್ಕೆ ಭೇಟಿ ನೀಡಿ ಸ್ಥಳೀಯ ಮಹಿಳೆಯರು, ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ಮತ್ತು ಮುಖ್ಯಾಧಿಕಾರಿ ಸತ್ಯನಾರಾಯಣ್ ಸದಸ್ಯರೊಂದಿಗೆ ಮಹತ್ವದ ಸಮೀಕ್ಷೆ ನಡೆಸಿತು. | Kannada Prabha

ಸಾರಾಂಶ

ವಿಜಯಪುರ: ಪಟ್ಟಣದ ದಶಕಗಳ ಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಕಾವೇರಿ ೬ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನಕ್ಕೆ ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ (JICA) ತಜ್ಞರ ತಂಡ ಭೇಟಿ ನೀಡಿ ಸಮೀಕ್ಷೆ ನಡೆಸಿತು

ವಿಜಯಪುರ: ಪಟ್ಟಣದ ದಶಕಗಳ ಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಕಾವೇರಿ ೬ನೇ ಹಂತದ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನಕ್ಕೆ ಜಪಾನ್ ಅಂತಾರಾಷ್ಟ್ರೀಯ ಸಹಕಾರ ಸಂಸ್ಥೆ (JICA) ತಜ್ಞರ ತಂಡ ಭೇಟಿ ನೀಡಿ ಸಮೀಕ್ಷೆ ನಡೆಸಿತು.

ಸುಮಾರು ೨೦೭ ಕೋಟಿ ರುಪಾಯಿ ವೆಚ್ಚದ ಈ ಬೃಹತ್ ಯೋಜನೆಗೆ ಸಾಲ ಮಂಜೂರು ಮಾಡುವ ಮೊದಲು ಪಟ್ಟಣದಲ್ಲಿ ನೀರಿನ ಅನಿವಾರ್ಯತೆ ಮತ್ತು ತಾಂತ್ರಿಕ ಸಿದ್ಧತೆಗಳ ಕುರಿತು ತಂಡ ಸಾರ್ವಜನಿಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿತು.

ಮನೆ ಮನೆಗೆ ಭೇಟಿ:

ಜೈಕಾ ಸಂಸ್ಥೆಯ ಪರಿಸರ ಮತ್ತು ಸಾಮಾಜಿಕ ವಿಷಯ ಪರಿಣತಿಗಳಾದ ಮಿಕಿಕೊ ಅಜುಮ, ಕಾನಾನಿನೊ ಹಾಗೂ ಆರ್ಥಿಕ ವಿಶ್ಲೇಶಕಿ ಇಮಿಕೊ ಪುಜಿತ ಅವರನ್ನೊಳಗೊಂಡ ತಂಡ ಪುರಸಭೆ ಕಾರ್ಯಾಲಯದಲ್ಲಿ ಸಭೆ ನಡೆಸಿದ ನಂತರ ವಾರ್ಡ್‌ಗಳಿಗೆ ಭೇಟಿ ನೀಡಿತು. ಚಿಕ್ಕಬಳ್ಳಾಪುರ ರಸ್ತೆಯ ಶುದ್ಧ ಕುಡಿಯುವ ನೀರಿನ ಘಟಕವನ್ನು ಪರಿಶೀಲಿಸಿದ ತಂಡ, ಸಾರ್ವಜನಿಕರ ಮನೆಗಳಿಗೆ ತೆರಳಿ ಜೀವನಶೈಲಿ ಹಾಗೂ ನೀರಿನ ಬಳಕೆ ಬಗ್ಗೆ ಮಾಹಿತಿ ಪಡೆದರು.

ಪುರಸಭೆ ಅಧ್ಯಕ್ಷೆ ಭವ್ಯಾ ಮಹೇಶ್ ಮತ್ತು ಮುಖ್ಯಾಧಿಕಾರಿ ಸತ್ಯನಾರಾಯಣ್ ಮಾತನಾಡಿ, ಪಟ್ಟಣದ ಜನಸಂಖ್ಯೆ ೫೦ ಸಾವಿರ ದಾಟಿದೆ. ಯಾವುದೇ ನದಿ ಮೂಲಗಳಿಲ್ಲದೆ ಸಾವಿರಾರು ಅಡಿ ಆಳಕ್ಕೆ ಕೊರೆದರೂ ಕೊಳವೆಬಾವಿಗಳಲ್ಲಿ ನೀರು ಸಿಗುತ್ತಿಲ್ಲ. ಎಚ್.ಎನ್.ವ್ಯಾಲಿ ನೀರು ತುಂಬಿದ ಕೆರೆಗಳ ಪಕ್ಕದ ಬಾವಿಗಳೇ ನಮಗೆ ಸದ್ಯದ ಆಧಾರ. ಕಾವೇರಿ ಯೋಜನೆ ಜಾರಿಯಾದರೆ ಮಾತ್ರ ಈ ಭಾಗದ ಜನರ ಆರೋಗ್ಯ ಮತ್ತು ಆರ್ಥಿಕತೆ ಸುಧಾರಿಸಲು ಸಾಧ್ಯ ಎಂದು ಯೋಜನೆಯ ಅನಿವಾರ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

ಈ ವೇಳೆ ಕರ್ನಾಟಕ ನೀರು ಸರಬರಾಜು ಮಂಡಳಿಯ ಎಇಇ ನಾಗರತ್ನ, ಅಭಿಲಾಷ್, ಬಿ.ಡಬ್ಲೂ.ಎಸ್.ಎಸ್.ಬಿ ಎಇಇ ರಂಗಪ್ಪ, ಪುರಸಭೆ ಸದಸ್ಯರಾದ ಸಿ.ಎಂ.ರಾಮು, ನಾರಾಯಣಸ್ವಾಮಿ, ನಂದಕುಮಾರ್, ವಿಮಲಾ ಬಸವರಾಜು, ಪರಿಸರ ಎಂಜಿನಿಯರ್ ಶೇಖರ್ ರೆಡ್ಡಿ ಪುರಸಭೆ ಸಿಬ್ಬಂದಿ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ: ವಿ.ಕೆ.ಜಗದೀಶ್
ಡಾ.ರಾಜ್‌ಕುಮಾರ್ ಜನಸಮೂಹದ ಸಾಂಸ್ಕೃತಿಕ ರಾಯಭಾರಿ: ಸಂದೇಶ್‌