ಕನ್ನಡಪ್ರಭ ವಾರ್ತೆ ಹನೂರು (ಚಾಮರಾಜನಗರ ಜಿಲ್ಲೆ)
ಈ ಸಂಬಂಧ, ಪ್ರಕರಣದ ಕಡತಗಳನ್ನು ಸಿಐಡಿ ತನಿಖಾಧಿಕಾರಿಗಳಿಗೆ ವೈಯಕ್ತಿಕವಾಗಿ ಹಸ್ತಾಂತರಿಸುವಂತೆ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ. ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಎಂ.ಮುತ್ತುರಾಜ್ಗೆ ಫ್ಯಾಕ್ಸ್ ಸಂದೇಶ ರವಾನೆಯಾಗಿದ್ದು, ಸೂಚನೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯ ರಾಮಾಪುರ, ಹನೂರು ಮತ್ತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಶೂಟೌಟ್ ಪ್ರಕರಣ, ಕಳ್ಳಬೇಟೆ ಶಿಬಿರಗಳ ಧ್ವಂಸ, ಜೀಪ್ ಜಖಂ, ಕಾಡಿಗೆ ಬೆಂಕಿ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾಯಿಸಲಾಗಿದೆ. ಪ್ರಕರಣಗಳ ಕಡತಗಳನ್ನು ಹೆಚ್ಚಿನ ತನಿಖೆಗಾಗಿ ಕೂಡಲೇ ಸಿಐಡಿಗೆ ವೈಯಕ್ತಿಕವಾಗಿ ಹಸ್ತಾಂತರಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಪೊಲೀಸ್ ಮಹಾನಿರ್ದೇಶಕರು, ಮೇಲ್ಕಂಡ ಪ್ರಕರಣಗಳ ಮುಂದಿನ ತನಿಖೆಯನ್ನು ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರಕರಣಗಳ ತನಿಖೆ ಪೂರ್ಣಗೊಂಡ ನಂತರ ವಿವರವಾದ ವರದಿಯನ್ನು ಈ ಕಚೇರಿಗೆ ಸಲ್ಲಿಸಬೇಕು ಎಂದು ಡಾ.ಎಂ.ಎ.ಸಲೀಂ ಸೂಚಿಸಿದ್ದಾರೆ.
ಈ ಘಟನೆಯನ್ನು ಖಂಡಿಸಿ ಮೃತರ ಕುಟುಂಬಸ್ಥರು, ಮಾರ್ಟಳ್ಳಿ-ಸಂದನಪಾಳ್ಯ, ಜಾಗೇರಿ ಭಾಗದ ಗ್ರಾಮಸ್ಥರು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಆಗಸ್ಟ್ 15 ಮತ್ತು 16ರಂದು ಹನೂರು ಪಟ್ಟಣದಲ್ಲಿ ಎರಡು ದಿನಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದರು.
ದಿನೇಶ್ ಕುಮಾರ್ ಮೀನಾ ಅವರು ಶೂಟ್ಔಟ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಸೋಕೋ ತಂಡ, ನಕ್ಸಲ್ ನಿಗ್ರಹ ದಳ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸೇರಿದಂತೆ ನುರಿತ ತಜ್ಞರ ತಂಡಗಳು ಸೇರಿದಂತೆ ಪ್ರಕರಣವನ್ನು ಪತ್ತೆಹಚ್ಚಲು ಮೂರು ತಂಡಗಳಾಗಿ ಪೊಲೀಸ್ ಇಲಾಖೆ ನಿಯೋಜನೆಗೊಳಿಸಲಾಗಿ ಸ್ಥಳ ಪರಿಶೀಲನೆ ನಡೆಸಿ ಸಂಬಂಧ ವರದಿಯನ್ನು ಶೇಖರಣೆ ಮಾಡಿದೆ.
ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪ:
ವರದಿಯನ್ನು ಪರಿಶೀಲಿಸಿದ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ವಿಶೇಷ ತನಿಖೆಗೆ ಆಗ್ರಹಿಸಿದ್ದರು.