)
ಮಂಗಳೂರು: ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಫರಾಜ್ ಯಾನೆ ಮೊಹಮ್ಮದ್ ಫರಾಜ್ (32), ದೇರಳಕಟ್ಟೆ ಸಮೀಪ ಮದನಿ ನಗರದ ಅಪಾರ್ಟ್ಮೆಂಟ್ ನಿವಾಸಿ ಎಂದು ಗುರುತಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದರೋಡೆ, ಹಲ್ಲೆ ಹಾಗೂ ಕಳವು ಸಂಬಂಧಿತ ನಾಲ್ಕು ಪ್ರಕರಣಗಳು, ಕೊಣಾಜೆ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಮತ್ತು ಕಳವು ಸಂಬಂಧಿತ ಎರಡು ಪ್ರಕರಣಗಳು, ಉತ್ತರ ಠಾಣೆಯಲ್ಲಿ ಹಲ್ಲೆ, ಬೆದರಿಕೆ, ಅಪಹರಣ ಮತ್ತು ದರೋಡೆಗೆ ಸಂಬಂಧಿಸಿದ ಎರಡು ಪ್ರಕರಣಗಳು ದಾಖಲಾಗಿವೆ. ಬರ್ಕೆ ಠಾಣೆಯಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಒಂದು ಪ್ರಕರಣ ಹಾಗೂ ಉರ್ವ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಒಂದು ಪ್ರಕರಣ ದಾಖಲಾಗಿದೆ.ಆರೋಪಿ ಉಳ್ಳಾಲ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಪ್ರಸ್ತುತ ಆರು ವಾರಂಟ್ಗಳು ಹಾಗೂ ಒಂದು ಪ್ರೊಕ್ಲಮೇಶನ್ ಜಾರಿಯಲ್ಲಿದೆ. ಬಂಧಿತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.