ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಡಿಎಆರ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಕ್ರೀದ್ ಹಬ್ಬ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಸೌಹಾರ್ದಯುತವಾಗಿ ರಾಜ್ಯಕ್ಕೇ ಮಾದರಿಯಾಗಿ ಹಬ್ಬವನ್ನು ಆಚರಿಸೋಣ. ಹಬ್ಬದ ವೇಳೆ ಸ್ವಚ್ಚತೆ ಕಾಪಾಡುವುದು ಮತ್ತು ಸುರಕ್ಷತೆ ಕುರಿತು ಈಗಾಗಲೇ ಎರಡು ಬಾರಿ ಸಭೆಯನ್ನು ಮಾಡಿ ಸಮಾಲೋಚನೆ ನಡೆಸಿ, ಅದೇ ರೀತಿ ಯೋಜನೆಗಳನ್ನು ರೂಪಿಸಿಕೊಂಡು ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹಬ್ಬದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು ಹಬ್ಬದ ದಿನದಂದು ಯಾವುದೇ ರೀತಿಯ ಕಾನೂನುಬಾಹಿರ ಘಟನೆಗಳು ನಡೆದರೆ ಅದನ್ನು ನಮ್ಮ ಗಮನಕ್ಕೆ ತರಬೇಕು ಎಂದರು.ಎಲ್ಲರನ್ನೂ ನಾವು ಸಮಾನವಾಗಿ ಕಾಣುತ್ತೇವೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮವನ್ನು ಕ್ಯೆಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಮಾತನಾಡಿ, ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಮೆರೆದು ಹಬ್ಬಗಳನ್ನು ಆಚರಣೆ ಮಾಡಿಕೊಂಡು ಹೋಗಬೇಕು. ಹಬ್ಬದ ನೆಪದಲ್ಲಿ ಜಿಲ್ಲೆಯ ಶಾಂತಿ ಕದಡಲು ಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಏನೇ ಸಮಸ್ಯೆ ಬಂದರು ಮೊದಲು ಪೊಲೀಸರಿಗೆ ವಿಷಯ ತಿಳಿಸಬೇಕು. 112 ಸಂಖ್ಯೆಗೆ ಕರೆ ಮಾಡಿ ತಿಳಿಸಬೇಕು ಎಂದರು.
ಚೆಕ್ಪೋಸ್ಟ್ ನಿಗಾ:
ಸಭೆಯಲ್ಲಿ ಉಪಸ್ಥಿತರಿದ್ದ ಹಿಂದೂ-ಮುಸ್ಲಿಂ ಧರ್ಮಗಳ ಮುಖಂಡರು ಮಾತನಾಡಿ, ಶಿವಮೊಗ್ಗದ ಸೌಹಾರ್ದ ಪರಂಪರೆಯನ್ನು ಎತ್ತಿಹಿಡಿಯಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವುದಾಗಿ ತಿಳಿಸಿದರು.