ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಇದರ ಅಂಗವಾಗಿ ಚಿಕ್ಕಮಗಳೂರು ತಾಲೂಕಿನ ಮಾಗಡಿ ಕೈ ಮರದಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ನಮ್ಮ ಜಿಲ್ಲೆಯಲ್ಲಿ 92 ಕಿ.ಮೀ. ಮಾನವ ಸರಪಳಿ ಹಾಗೂ ಸಂವಿಧಾನ ಬಗ್ಗೆ ತಿಳಿವಳಿಕೆ ಮೂಡಿಸುವುದು ಸೇರಿದಂತೆ ವಿವಿಧ ಕಾರ್ಯ ಕ್ರಮಗಳು ನಡೆಯಲಿವೆ. ಮಾಗಡಿ ಕೈಮರದಿಂದ ಎಐಟಿ ಸರ್ಕಲ್, ಸಖರಾಯಪಟ್ಟಣ, ಕಡೂರು-ಬೀರೂರು, ತರೀಕೆರೆ ಗಡಿ ಭಾಗವಾದ ಎಂ.ಸಿ. ಹಳ್ಳಿಯವರಿಗೂ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಪ್ರತಿ ಒಂದು ಕಿ.ಮೀ. ದೂರದಲ್ಲಿ ಆ ಭಾಗದ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಸಂಘ ಸಂಸ್ಥೆ ಪದಾಧಿಕಾರಿಗಳು ವಿವಿಧ ಸಂಘಟನೆಗಳು, ಸಮುದಾಯದ ಪ್ರಮುಖರು, ಮಠ ಮಾನ್ಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸ್ಥಳೀಯ ಜನ ಪ್ರತಿನಿಧಿ ಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಭಂದಿ, ಗ್ರಾಮಗಳ ಜನತೆ, ಸ್ತ್ರೀಶಕ್ತಿ, ವಿವಿಧ ಸಂಘಗಳ ಪದಾಧಿಕಾರಿಗಳು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವ ಸಾರಬೇಕು ಎಂದು ಕರೆ ನೀಡಿದರು.ಈ ಬೃಹತ್ ಕಾರ್ಯಕ್ರಮದಲ್ಲಿ ಜನರ ಸಹಭಾಗಿತ್ವ ಬಹಳ ಮುಖ್ಯ. ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ನಾವು ಹೊಂದಿದ್ದೇವೆ. ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸ್ವಯಂ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಸರ್ಕಾರಿ ಹಿರಿಯ ಅಧಿಕಾರಿಗಳಿಗೆ ಕಾರ್ಯಕ್ರಮ ಯಶಸ್ವಿಗೊಳಿಸುವ ಜವಾಬ್ದಾರಿ ವಹಿಸಲಾಗಿದ್ದು, ಆಯಾಯ ಗ್ರಾಪಂ ಅಭಿವೃದ್ಧಿ ಹಾಗೂ ತಾಲೂಕು ಅಧಿಕಾರಿಗಳಿಗೆ ನಿಗಾ ವಹಿಸಲು ಉಸ್ತುವರಿವಹಿಸಲಾಗಿದೆ ಎಂದರು.ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿರುವಾಗ ಸ್ವಾತಂತ್ರ್ಯದ ಮಹತ್ವ ತಿಳಿಯುವುದು ಬಹಳ ಮುಖ್ಯ. ನಮ್ಮ ಸಂವಿಧಾನ ಭಾರತೀಯರ ಹೆಮ್ಮೆ.ಸ್ಥಳೀಯ ಗ್ರಾಮಸ್ಥರು ಹಸಿರು ತೋರಣಗಳಿಂದ ಸಿಂಗರಿಸಿ ತಮ್ಮ ಊರುಗಳಿಗೆ ಸ್ವಾಗತಿಸಿ ಬಿಳ್ಕೊಡುಗೆ ನೀಡಬೇಕು ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೀತೆಂದ್ರ ಕುಮಾರ್, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೀಶ್ ಇದ್ದರು.