ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಹಬ್ಬ ಆಚರಿಸಿ

KannadaprabhaNewsNetwork |  
Published : Aug 20, 2025, 01:30 AM IST
19ಎಚ್‌ಯುಬಿ26ನವಲಗುಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಶಾಂತಿ ಪಾಲನಾ ಸಭೆ ಜರುಗಿತು | Kannada Prabha

ಸಾರಾಂಶ

ಹಬ್ಬದ ವೇಳೆ ಧ್ವನಿವರ್ಧಕ ಬಳಕೆ, ಶಾಮಿಯಾನ, ಮೆರವಣಿಗೆ ಮಾರ್ಗ, ಗಣೇಶ ಮೂರ್ತಿ ಕೂರಿಸುವುದು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು.

ನವಲಗುಂದ: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ- ಸೌಹಾರ್ದದೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ಆಚರಿಸಬೇಕು ಎಂದು ತಹಸೀಲ್ದಾರ್ ಸುಧೀರ ಸಾಹುಕಾರ ಹೇಳಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ಮಂಗಳವಾರ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆ ನಿಮಿತ್ತ ಕರೆದ ಶಾಂತಿ ಪಾಲನಾ ಸಭೆಯಲ್ಲಿ ಮಾತನಾಡಿದರು.

ಹಬ್ಬದ ವೇಳೆ ಧ್ವನಿವರ್ಧಕ ಬಳಕೆ, ಶಾಮಿಯಾನ, ಮೆರವಣಿಗೆ ಮಾರ್ಗ, ಗಣೇಶ ಮೂರ್ತಿ ಕೂರಿಸುವುದು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತ ಹಾಗೂ ಸಂಚಾರ ದಟ್ಟಣೆಯಾಗದಂತೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.

ಪಿಎಸ್ಐ ಜನಾರ್ಧನ ಭಟ್ರಳ್ಳಿ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಉಂಟಾಗದಂತೆ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯೊಂದಿಗೆ ನಡೆದುಕೊಳ್ಳಬೇಕು ಎಂದರು.

ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಮುಖ್ಯಾಧಿಕಾರಿ ಶರಣಪ್ಪ ಪೂಜಾರ. ಹಣಮರಡ್ಡಿ ರೂಗಿ, ಸಾವಿತ್ರಿ ಮುಪ್ಪಯ್ಯನವರ, ಹನುಮರಡ್ಡಿ ರೊಗಿ, ಪುರಸಭೆ ಅಧ್ಯಕ್ಷ ಶಿವಾನಂದ ತಡಸಿ, ನಗರದ ಹಿರಿಯರಾದ ರಾಯನಗೌಡ ಪಾಟೀಲ, ರಿಯಾಜಅಹ್ಮದ ಪಿರಜಾದಿ, ಶಂಕ್ರಪ್ಪ ತೋಟದ, ರವಿ ಬೆಂಡಿಗೇರಿ, ಉಸ್ಮಾನ ಬಬರ್ಚಿ, ಜೀವನ ಪವಾರ, ಅಬ್ಬಾಸ ದೇವರಿಡು, ವೀರಣ್ಣ ಅಂಗಡಿ, ಈರಣ್ಣ ಚವಡಿ, ಸಂತೋಷ ನಾವಳ್ಳಿ ಸೇರಿದಂತೆ ಗಜಾನನ ಮಂಡಳಿ ಸದಸ್ಯರು ಅಧಿಕಾರಿಗಳು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌