ಕಾನೂನು ಚೌಕಟ್ಟಲ್ಲಿ ಶಾಂತಿಯುತವಾಗಿ ಗಣೇಶೋತ್ಸವ ಆಚರಿಸಿ

KannadaprabhaNewsNetwork |  
Published : Sep 05, 2026, 01:30 AM IST
ಫೋಟೊ:೦೪ಕೆಪಿಸೊರಬ-೦೧ : ಸೊರಬ ಪಟ್ಟಣದ ಶ್ರೀರಂಗ ಕನ್ವೆನ್ಶಲ್ ಹಾಲ್‌ನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಉಪ ಅಧೀಕ್ಷಕ ಕೆ.ಇ. ಕೇಶವ್ ಮಾತನಾಡಿದರು. | Kannada Prabha

ಸಾರಾಂಶ

Celebrate Ganesh Chaturthi peacefully within the legal framework.

ಕನ್ನಡಪ್ರಭ ವಾರ್ತೆ ಸೊರಬ

ಗಣೇಶ ಹಬ್ಬವನ್ನು ಸಾರ್ವಜನಿಕರ ಆರೋಗ್ಯದ ಮೇಲೆ ಮತ್ತು ಪರಿಸರದ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ, ಕಾನೂನಿನ ಚೌಕಟ್ಟಿನಲ್ಲಿ ಶಾಂತಿಯುತವಾಗಿ ಮತ್ತು ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಪೊಲೀಸ್ ಉಪ ಅಧೀಕ್ಷಕ ಕೆ.ಇ. ಕೇಶವ್ ಕರೆ ನೀಡಿದರು.

ಪಟ್ಟಣದ ಶ್ರೀರಂಗ ಕನ್ವೆನ್ಶಲ್ ಹಾಲ್‌ನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಕಾನೂನಿನ ಪರಿಮಿತಿಯಲ್ಲಿ ನಾವು ಏನು ಪಾಲಿಸಬೇಕೋ ಅದನ್ನೆಲ್ಲಾ ಪಾಲಿಸುತ್ತೇವೆ. ಅದೇ ರೀತಿ ಸಾರ್ವಜನಿಕರು ಕೂಡ ಕಾನೂನಿನ ಪರಿಮಿತಿಯಲ್ಲಿ ನಡೆದುಕೊಂಡು ಶಾಂತಿಯುತವಾಗಿ ಹಬ್ಬ ಆಚರಿಸಬೇಕೆಂದು ತಿಳಿಸಿದರು.

ಅತಿಯಾದ ಶಬ್ದಮಾಲಿನ್ಯ ಮಾಡುವ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದ್ದು, ನಿಗದಿತ ಸಮಯದೊಳಗೆ ಧ್ವನಿವರ್ಧಕ ಬಳಸಬೇಕು. ರಾತ್ರಿ ೧೦ ಗಂಟೆಯ ನಂತರ ಬಳಕೆ ಮಾಡಬಾರದು. ವಿದ್ಯುತ್ ಅಲಂಕಾರ ಮಾಡುವಾಗ ಮುನ್ನೆಚ್ಚರಿಕೆ ವಹಿಸಬೇಕು. ವಿಸರ್ಜನಾ ಮೆರವಣಿಗೆ ವೇಳೆ ಶಾಂತಿ ಕಾಪಾಡಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಎಲ್ಲಾ ಗಣೇಶೋತ್ಸವ ಸಮಿತಿಯವರು ತಪ್ಪದೇ ಪುರಸಭೆ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು, ಸಹಕಾರ ನೀಡಬೇಕು ಎಂದರು.

ವೃತ್ತ ನಿರೀಕ್ಷಕ ಮಹಾಂತೇಶ್ ನಂಬಿ ಮಾತನಾಡಿ, ಹಬ್ಬ ಆಚರಣೆ ವೇಳೆ ಇತರೆ ಧರ್ಮದವರಿಗೆ ತೊಂದರೆ ಆಗುವಂತಹ ಯಾವುದೇ ಚಟುವಟಿಕೆ ನಡೆಸಬಾರದು. ಪ್ರಚೋದನಕಾರಿ ಬ್ಯಾನರ್, ಹಾಡು, ಘೋಷಣೆಗಳಿಗೆ ಅವಕಾಶವಿಲ್ಲ ಎಂದರು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಅಥವಾ ತೊಂದರೆ ಉಂಟಾದಲ್ಲಿ ಆಯಾ ಕಮಿಟಿಯ ಸದಸ್ಯರೇ ನೇರವಾಗಿ ಜವಾಬ್ದಾರರಾಗಿರುತ್ತಾರೆ ಎಂದು ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನವೀನ್ ತಿಳಿಸಿದರು.

ಶಾಂತಿ ಸಭೆಯಲ್ಲಿ ಪುರಸಭಾ ಆಶ್ರಯ ಸಮಿತಿ ಅಧ್ಯಕ್ಷ ಪ್ರಶಾಂತ್ ಮೇಸ್ತ್ರಿ, ಸದಸ್ಯ ನೆಹರು ಕೊಡೆಕಣೆ, ರಾಮಣ್ಣ, ಕರಿಯಪ್ಪ, ಭೂಪಾಲ, ರಾಜು, ಚಂದ್ರಕಾಂತ, ದಾನಪ್ಪ, ಅಲೆಗ್ಸಾಂಡರ್, ಚಂದ್ರು, ಅಜಯ್, ಪೊಲೀಸ್ ಸಿಬ್ಬಂದಿಗಳಾದ ಲೋಕೇಶ್, ರಾಘವೇಂದ್ರ, ವಿನಯ್, ಶಿವರಾಜ್, ಸೋಮಶೇಖರ್ ಸೇರಿದಂತೆ ಪಟ್ಟಣದ ವಿವಿಧ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

-----

ಫೋಟೊ:೦೪ಕೆಪಿಸೊರಬ-೦೧ :

ಸೊರಬ ಪಟ್ಟಣದ ಶ್ರೀರಂಗ ಕನ್ವೆನ್ಶಲ್ ಹಾಲ್‌ನಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಉಪ ಅಧೀಕ್ಷಕ ಕೆ.ಇ. ಕೇಶವ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ಕಪಡೆ ಯೋಜನೆ ಉದ್ದೇಶ ಮಹಿಳಾ ಸಬಲೀಕರಣ, ಸುರಕ್ಷತೆ: ಲಕ್ಷ್ಮೀ
ಸಿಂಡಿಕೇಟ್ ಸದಸ್ಯತ್ವದಿಂದ ಕನ್ನಾಳೆ ವಜಾಗೊಳಿಸಿ