ಕನ್ನಡಪ್ರಭ ವಾರ್ತೆ ಕಾಗವಾಡ
ತಾಲೂಕಿನ ಶಿರುಗುಪ್ಪಿ ಗ್ರಾಪಂ ಸಭಾಭವನದಲ್ಲಿ ನಡೆದ ಕಾಗವಾಡ ತಾಲೂಕು ಮಟ್ಟದ ಶಾಂತಿಪಾಲನೆ ಸಭೆ ಮತ್ತು ಎಸ್ಸಿ/ಎಸ್ಟಿ ಸಮುದಾಯದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಕಾಗವಾಡ ತಾಲೂಕಿನಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತೆ ನೆಲೆಸಿದ್ದು ಸಂತಸದ ವಿಷಯವಾಗಿದೆ. ಮುಂದೆಯೂ ಇದೇ ರೀತಿ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿ ಎಂದರು.
ಎಸ್ಪಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಹೋಳಿ ಹಬ್ಬದ ಸಂದರ್ಭದಲ್ಲಿ ಕಾಮಣ್ಣನ ದಹನದ ವೇಳೆ ಚಿಕ್ಕ ಮಕ್ಕಳ ಬಗ್ಗೆ ಜಾಗ್ರತೆ ಇರಲಿ. ಬಣ್ಣ ಆಡುವಾಗ ನೈಸರ್ಗಿಕ ಬಣ್ಣದ ಉಪಯೋಗ ಮಾಡಿ, ಕಣ್ಣುಗಳ ಬಗ್ಗೆ ಎಚ್ಚರಿಕೆ ವಹಿಸಿರಿ. ತಾಲೂಕಿನಲ್ಲಿ ಸೌಹಾರ್ದತೆ ಮನೆ ಮಾಡಿದ್ದು, ಇಲ್ಲಿಯ ವರೆಗೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಿಲ್ಲ. ಮುಂದೆಯೂ ಇದೇ ರೀತಿ ಎಲ್ಲಾ ಹಬ್ಬ ಹರಿದಿನಗಳನ್ನು ಒಟ್ಟಿಗೆ ಸೌಹಾರ್ದತೆಯಿಂದ ಆಚರಿಸಿ ಎಂದರು.ದಲಿತ ಮುಖಂಡ ಸಂಜಯ ತಳವಳಕರ ಮಾತನಾಡಿ, ಈಗ ಕರೆದಿರುವ ಶಾಂತಿಪಾಲನ ಸಭೆಯಲ್ಲಿ ಎಸ್ಸಿ ಸಮುದಾಯದ ಕುಂದು ಕೊರತೆಗಳ ಕುರಿತು ಚರ್ಚಿಸುವುದು ಬೇಡ. ಅದಕ್ಕಾಗಿ ಮುಂದೊಂದು ದಿನ ಪ್ರತ್ಯೇಕ ಸಭೆ ನಡೆಸಿ ಎಂದು ಸಲಹೆ ನೀಡಿದರು. ಅದಕ್ಕೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿ, ಮುಂದಿನ ದಿನಗಳಲ್ಲಿ ಸಮುದಾಯದವರ ಕುಂದುಕೊರತೆ ಪಾಲನೆ ಸಭೆ ಪ್ರತ್ಯೇಕವಾಗಿ ಕರೆಯಲಾಗುವುದು ಎಂದು ತಿಳಿಸಿದರು.
-----
ಬಾಕ್ಸ್.... ಗುಣಮಟ್ಟದ ಮೊಟ್ಟೆ ಪೂರೈಕೆಗೆ ಸೂಚನೆತಾಲೂಕಿನ ಶಾಲೆಗಳಿಗೆ ಮತ್ತು ಅಂಗನವಾಡಿಗಳಿಗೆ ಕಳಪೆ ಮಟ್ಟದ ಮೊಟ್ಟೆ ಪೂರೈಕೆ ಮಾಡುತ್ತಿರುವ ಕುರಿತು ಬಿಇಒ ರವರು ಫೋಟೋ ಸಮೇತ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನ ಸೆಳೆದು, ಉತ್ತಮ ಗುಣಮಟ್ಟದ ಮೊಟ್ಟೆಗಳನ್ನು ಪೂರೈಕೆ ಮಾಡಬೇಕೆಂದು ಆಗ್ರಹಿಸಿದರು. ಇದಕ್ಕೆ ಜಿಲ್ಲಾಧಿಕಾರಿ ಕೂಡಲೇ ಸ್ಪಂದಿಸಿ, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಂಡು, ಉತ್ತಮ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಲಾಗುವುದು ಎಂದರು.