ಕೊಪ್ಪಳ: ಪ್ರತಿ ವರ್ಷದಂತೆ ಈ ವರ್ಷವೂ ಕಾಯಕ ಶರಣರ ಹಾಗೂ ಮಹನಿಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಫೆ.16 ರಂದು ನಗರದ ಸಾಹಿತ್ಯ ಭವನದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಗಡಿಯಾರ ಕಂಬ ವೃತ್ತದಿಂದ ಸಾಹಿತ್ಯ ಭವನದವರೆಗೆ ಮಾಡಿವಾಳ ಮಾಚಿದೇವರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯಲ್ಲಿ ಎಲ್ಲರೂ ಭಾಗವಹಿಸಬೇಕು. ವೇದಿಕೆ ಕಾರ್ಯಕ್ರಮ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದರು.
ಸವಿತಾ ಮಹರ್ಷಿ ಜಯಂತಿ ಜ.25 ರಂದು ಸರಳವಾಗಿ ಆಚರಿಸಲಾಗುತ್ತದೆ. ಅಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಈ ಎಲ್ಲ ಮಹನೀಯರ ಜಯಂತಿ ಕಾರ್ಯಕ್ರಮಗಳ ದಿನದಂದು ಎಲ್ಲ ಶಾಲಾ-ಕಾಲೇಜುಗಳಲ್ಲಿ ಅವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಬೇಕು ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಸವಿತಾ ಸಮಾಜದ ಮುಖಂಡ ತುಕಾರಾಂ, ಮಾರುತಿ ಸೂಗೂರ, ನಾಗರಾಜ ಕಂಪ್ಲಿ, ದೇವಪ್ಪ ಹಡಪದ, ಮಡಿವಾಳ ಸಮಾಜದ ಮುಖಂಡ ಕೃಷ್ಣ ಮಡಿವಾಳ, ರಾಮಣ್ಣ ಕುಟಗನಹಳ್ಳಿ, ಗವಿಸಿದ್ದಪ್ಪ ಮಡಿವಾಳ, ಕಿರಣ ಮಡಿವಾಳ, ಕಾಯಕ ಶರಣರ ಸಮಾಜದ ಮುಖಂಡ ಡಾ.ಬಿ.ಜ್ಞಾನಸುಂದರ್, ರಾಮಣ್ಣ ಕಂದಾರಿ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.