ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಹಬ್ಬ ಆಚರಿಸಿ: ಸಂತೋಷ ಚವ್ಹಾಣ್

KannadaprabhaNewsNetwork |  
Published : Mar 18, 2026, 02:30 AM IST
ಹರಪನಹಳ್ಳಿ: ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ನಡೆದ ರಂಜಾನ್ ಹಬ್ಬದ ಶಾಂತಿ ಸಭೆಯಲ್ಲಿ ಡಿವೈಎಸ್ಪಿ ಸಂತೋಷ ಚವ್ಹಾಣ್ ಮಾತನಾಡಿದರು. | Kannada Prabha

ಸಾರಾಂಶ

ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಎಲ್ಲರೂ ಸೌಹಾರ್ದದಿಂದ ರಂಜಾನ್ ಹಬ್ಬ ಆಚರಿಸಬೇಕು ಎಂದು ಡಿವೈಎಸ್ಪಿ ಸಂತೋಷ ಚವ್ಹಾಣ್ ತಿಳಿಸಿದರು.

ಹರಪನಹಳ್ಳಿ: ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಎಲ್ಲರೂ ಸೌಹಾರ್ದದಿಂದ ರಂಜಾನ್ ಹಬ್ಬ ಆಚರಿಸಬೇಕು ಎಂದು ಡಿವೈಎಸ್ಪಿ ಸಂತೋಷ ಚವ್ಹಾಣ್ ತಿಳಿಸಿದರು.ನಗರದ ಪೊಲೀಸ್ ಠಾಣೆಯ ಆವರಣದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಬರುವ ಶಾಂತಿ ಕದಡುವ ಫೇಕ್ ನ್ಯೂಸ್ ಗಳನ್ನು ಯಾರು ನಂಬಬಾರದು ಮತ್ತು ಅವುಗಳನ್ನು ಪೋಸ್ಟ್ ಮಾಡಬಾರದು. ಹುಡುಗರು ವೇಗವಾಗಿ ಬೈಕ್ ಚಲಾಯಿಸಬಾರದು, ರಿಲ್ಸ್ ಹುಚ್ಚು ಬಿಡಬೇಕು ಎಂದು ಹೇಳಿದರು.

ಇಲಾಖೆಯ ನಿಯಮಗಳನ್ನು ಎಲ್ಲರೂ ಪಾಲಿಸಬೇಕು, ಊರಿಗೆ ಕೆಟ್ಟ ಹೆಸರು ತರುವಂತಹ ಕೆಲಸ ಮಾಡಬಾರದು. ಹಬ್ಬವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು.

ಸಿಪಿಐ ಮಹಾಂತೇಶ ಜಿ. ಸಜ್ಜನ್ ಪ್ರಾಸ್ತಾವಿಕವಾಗಿ ಮಾತನಾಡಿ, ರಂಜಾನ್ ಹಬ್ಬವನ್ನು ಎಲ್ಲರೂ ಶಾಂತ ರೀತಿಯಲ್ಲಿ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು ಎಂದರು.

ನಗರಸಭೆ ಮಾಜಿ ಸದಸ್ಯ ಅಬ್ದುಲ್ ರೆಹಮಾನ್ ಮಾತನಾಡಿ, ನಮ್ಮ ಸಂತೋಷಕ್ಕಾಗಿ ಹಬ್ಬ ಹರಿದಿನಗಳನ್ನು ಆಚರಿಸಿತ್ತ ಬಂದಿದ್ದೇವೆ. ಅದೇ ರೀತಿ ರಂಜಾನ್ ಹಬ್ಬವನ್ನು ಶಾಂತಿ ಸೌಹಾರ್ದದಿಂದ ಆಚರಿಸೋಣ. ಶಾಂತಿ ಸಭೆಗೆ ಎಲ್ಲ ಸಮಾಜದ ಮುಖಂಡರನ್ನು ಕರೆದು ಮಾಡಿದರೆ ಸೂಕ್ತ ಎಂದು ಸಲಹೆ ನೀಡಿದರು.

ಮುಖಂಡ ನೂರ್ ಅಹಮದ್ ಮಾತನಾಡಿ, ರಂಜಾನ್ ಹಬ್ಬವನ್ನು ಎಲ್ಲರೂ ಅಣ್ಣ ತಮ್ಮಂದಿರಂತೆ ಆಚರಿಸೋಣ. ಹಬ್ಬದ ಸಂದರ್ಭದಲ್ಲಿ ಹುಡುಗರು ಸಣ್ಣಪುಟ್ಟ ತಪ್ಪ ಮಾಡಿದರೆ ಪೊಲೀಸರು ಅವರಿಗೆ ತಿಳಿವಳಿಕೆ ಹೇಳಿ ಕಳಿಸಬೇಕು ಎಂದರು. ಕುಂಚೂರು ಇಬ್ರಾಹಿಂ, ಖಾಜಾ ಸಾಬ್ ಮಾತನಾಡಿದರು.

ಹೂವಿನಹಡಗಲಿ ಸಿಪಿಐ ಮಲ್ಲು ಹೂಗಾರ, ಹರಪನಹಳ್ಳಿ, ಅರಸೀಕೆರೆ, ಹಲುವಾಗಲು, ಚಿಗಟೇರಿ ಹಡಗಲಿ, ಹಿರೇಹಡಗಲಿ, ಇಟಿಗಿ ಠಾಣೆಯ ಪಿಎಸ್‌ಐಗಳು ಮುಸ್ಲಿಂ ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಬಾರಿ 10-13ನೇ ಸ್ಥಾನದ ಮೇಲೆ ವಿಜಯನಗರ ಕಣ್ಣು
ಹುಡುಗಿಗಾಗಿ ತಮ್ಮನನ್ನೇ ಕೊಲೆ ಮಾಡಿದ ಅಣ್ಣ!