ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಪಟ್ಟಣ ಪೊಲೀಸ್ ಠಾಣೆ ಸಭಾಂಗಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಹಿಂದೂ-ಮುಸ್ಲಿಂ ಬಾಂಧವರ ಪೂರ್ವಭಾವಿ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿ, ಹಿಂದೂ ಬಾಂಧವರು ಆಚರಿಸುವ ಯುಗಾದಿ ಹಬ್ಬದಲ್ಲಿ ಮುಸ್ಲಿಂ ಬಾಂಧವರು ಭಾಗವಹಿಸಿ ಒಬ್ಬಟ್ಟು ತುಪ್ಪವನ್ನು ತಿಂದು ಶುಭ ಕೋರುವುದು, ಮುಸ್ಲಿಂ ಬಾಂಧವರು ಉಪವಾಸ ವ್ರತ ನಡೆಸಿ ಭಕ್ತಿಯಿಂದ ಆಚರಿಸುವ ರಂಜಾನ್ ಹಬ್ಬದಲ್ಲಿ ಹಿಂದೂಗಳು ಭಾಗವಹಿಸಿ ಶುಭ ಹಾರೈಸುವುದು ಈ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ ಎಂದರು.
ಹಿಂದೂ-ಮುಸ್ಲಿಂ ಬಾಂಧವರ ಭಾವನೆಗಳಿಗೆ ಧಕ್ಕೆಯಾಗದಂತೆ, ವದಂತಿಗಳಿಗೆ ಕಿವಿಗೊಡದಂತೆ ಹಬ್ಬ ಆಚರಿಸಬೇಕು. ಯಾವುದೇ ವಿಚಾರದ ಬಗ್ಗೆ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು. ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವ ಕಿಡಿಗೇಡಿಗಳು ಹಾಗೂ ಸಮಾಜ ವಿಧ್ವಂಸಕ ಶಕ್ತಿಗಳು ಕಂಡು ಬಂದರೆ ಕೂಡಲೇ ಪೋಲಿಸರ ಗಮನಕ್ಕೆ ತಂದು ಕಿಡಿಗೇಡಿಗಳನ್ನು ಮಟ್ಟ ಹಾಕಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಯುಗಾದಿ ಹಬ್ಬದಲ್ಲಿ ಇಸ್ಪೀಟ್ ಸೇರಿದಂತೆ ಯಾವುದೇ ರೀತಿಯ ಜೂಜಾಟ ಆಡದಂತೆ ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಜೂಜಾಟ ಆಡದೇ ಸಹಕರಿಸಬೇಕು ಎಂದು ಹೇಳಿದರು.
ಪಟ್ಟಣ ಠಾಣೆ ಸಬ್ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಹಲವರನ್ನು ಸ್ವಾಗತಿಸಿ, ವಂದಿಸಿದರು.