ಜಿಲ್ಲಾದ್ಯಂತ ಕನ್ಯಾಮಾತೆ ಮರಿಯಮ್ಮ ಜನ್ಮ ದಿನಾಚರಣೆ

KannadaprabhaNewsNetwork | Published : Sep 9, 2024 1:31 AM

ಸಾರಾಂಶ

ಮಾತೆ ಮರಿಯಮ್ಮನವರ ಜನ್ಮದಿನದ ಬಲಿಪೂಜೆಯನ್ನು ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಬಲಿಪೂಜೆ ಸಮರ್ಪಿಸಿದರು. ನೂರಾರು ಬಾಂಧವರು ಪಾಲ್ಗೊಂಡಿದ್ದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಜಿಲ್ಲೆಯಾದ್ಯಂತ ರೋಮನ್ ಕ್ಯಾಥೋಲಿಕ್ ಕ್ರೈಸ್ತರ ಬಾಂಧವರು ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವವನ್ನು ಆಚರಿಸಿದರು.

ಮಾತೆಯ ಜನ್ಮದಿನದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಆಡಂಬರ ಬಲಿಪೂಜೆ ಹಾಗೂ ನೂತನ ಬತ್ತದ ತೆನೆಗಳನ್ನು ಭಾನುವಾರದಂದು ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾದರ್ ವಿಜಯಕುಮಾರ್ ನೆರವೇರಿಸಿದರು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಈ ಪ್ರಾರ್ಥನೆ ಹಾಗೂ ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.

ಮಾತೆ ಮರಿಯಮ್ಮನವರ ಜನ್ಮದಿನದ ಬಲಿಪೂಜೆಯನ್ನು ಸಂತ ಅಂತೋಣಿ ದೇವಾಲಯದಲ್ಲಿ ದಿವ್ಯ ಬಲಿಪೂಜೆಯನ್ನು ಸಮರ್ಪಿಸಿದರು. ನಂತರ ದೇವಾಲಯದಿಂದ ಮಾತೆ ಮರಿಯಮ್ಮನವರ ಮೂರ್ತಿಯನ್ನು ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ಪುಷ್ಪನಮನ ಸಲ್ಲಿಸಲಾಯಿತು.

8 ರಂದು ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ಜಗತ್ತಿನಾದ್ಯಂತ ಆಚರಿಸಲಾಗುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ ನಡೆಯುವ 9 ದಿನಗಳ ದಿವ್ಯ ಬಲಿಪೂಜೆ, ಪ್ರಭೋದನೆ ಹಾಗೂ ನೊವೇನಾ ಪ್ರಾರ್ಥನೆ ಪುಷ್ಪಾನಮನಗಳನ್ನು ಸಲ್ಲಿಸಲಾಯಿತು. ಸೆ.8 ರವರೆಗೆ ವಿಶೇಷ ರೀತಿಯಲ್ಲಿ ಜನ್ಮದಿನವನ್ನು ವಿಶೇಷ ಪೂಜೆಯೊಂದಿಗೆ ಆಚರಿಸಲಾಯಿತು.

ನೊವೇನಾ ಪ್ರಾರ್ಥನೆ ಸಂದರ್ಭದಲ್ಲಿ ವಿಶೇಷವಾಗಿ ಕನ್ಯಾಮಾತೆ ಮರಿಯಮ್ಮನವರಿಗೆ ವಿವಿಧ ಬಗೆಯ ಸೀರೆಗಳನ್ನು ತೊಡಿಸಲಾಗುವುದು. ಚಿಕ್ಕಮಕ್ಕಳು, ಯವಕ, ಯುವತಿಯರು ಹಾಗೂ ಹಿರಿಯರು ಪ್ರತಿ ದಿನ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಗಾಯನ ಬಲಿಪೂಜೆಯಲ್ಲಿ ಪಾಲ್ಗೊಂಡು ನಂತರ ತಾವು ತಂದ ಹೂವುಗಳನ್ನು ಕ್ರಿಸ್ತರ ತಾಯಿ ನಮ್ಮೆಲ್ಲಾರ ಮಾತೆ ಮರಿಯಮ್ಮನವರಿಗೆ ಸಮರ್ಪಿಸುತ್ತಾರೆ.

9 ದಿನಗಳ ನೊವೇನಾ ಪ್ರಾರ್ಥನೆ ಕಾರ್ಯಕ್ರಮಗಳೊಂದಿಗೆ ದಿನ ಸೆ.8 ರಂದು ಹೊಸ ತೆನೆಗಳ ‘ಮೊಂತಿ ಪೆಸ್ತ್’ ಹಬ್ಬವನ್ನು ಎಲ್ಲ ದೇವಾಲಯಗಳಲ್ಲಿ ಸಾಮೂಹಿಕವಾಗಿ ಆಚರಿಸಿ ಪ್ರಾರ್ಥನೆ ಮಾಡಲಾಗುತ್ತದೆ. ಮನೆ ಮನೆಗಳಲ್ಲಿ ನೂತನವಾಗಿ ನೀಡಲಾದ ಬತ್ತದ ತೆನೆಗಳನ್ನು ತಾವು ತಯಾರಿಸುವ ಭಕ್ಷ ಭೋಜನಗಳೊಂದಿಗೆ ಸೇರಿಸಿ ಸೇವಿಸುವುದು ಈ ಹಬ್ಬದ ಸಂಪ್ರದಾಯವಾಗಿದೆ.

ಮೊಂತಿ ಪೆಸ್ತ್ ಅಂಗವಾಗಿ ಭಾನುವಾರ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾದರ್ ವಿಜಯಕುಮಾರ್ ಹಾಗೂ ಸಂತ ಅಂತೋಣಿ ಬಲಿಪೂಜೆ ಪ್ರವಚನಗಳನ್ನು ನೀಡಿದರಲ್ಲದೆ ಮೊಂತಿಪೆಸ್ತ್ ಅಂಗವಾಗಿ ನೂತನ ತೆನೆಗಳನ್ನು ಆಶೀರ್ವಚಿಸಿ ವಿತರಿಸಿದರು. ಕ್ರೈಸ್ತ ಬಾಂದವರು ಮನೆ ಮನೆಗಳಿಂದ ಒಗ್ಗೂಡಿಸಿ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿ, ನಂತರ ಪರಸ್ಪರ ಒಬ್ಬರಿಗೊಬ್ಬರು ಮಾತೆ ಮರಿಯ್ಮನವರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹಬ್ಬದ ಸಡಗರಕ್ಕೆ ಮುನ್ನುಡಿ ಇಟ್ಟರು.

ಇದೇ ಸಂದಭದಲ್ಲಿ 60 ವರ್ಷ ಮೇಲ್ಪಟವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಅವರನ್ನು ಗೌರವಿಸಲಾಯಿತು.

7ನೇ ಹೊಸಕೋಟೆ ಸಂತ ಸೆಬಾಸ್ಟೀನ್ ದೇವಾಲಯದ ಧರ್ಮಗುರುಗಳಾದ ಸೆಬಾಸ್ಟೀನ್ (ಸುನಿಲ್), ರೇ.ಪಾ.ಸುನಿಲ್ ಪೂವತ್ತಂಗಲ್ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಆಡಂಬರ ಬಲಿಪೂಜೆಯನ್ನು ಸಮರ್ಪಿಸಿ ನಂತರ ಕ್ರೈಸ್ತ ಬಾಂದವರು ಮನೆ ಮನೆಗಳಿಂದ ಒಗೂಡಿಸಿ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿದರು.

ಮಾದಾಪುರ ಸಮೀಪದ ಪವಿತ್ರ ಕುಟುಂಬದ ದೇವಾಲಯದಲ್ಲೂ ಕನ್ಯಾಮಾತೆ ಮರಿಯಮ್ಮನವರ ಜನ್ಮ ದಿನೋತ್ಸವದ ಅಂಗವಾಗಿ ದೇವಾಲಯದಲ್ಲಿ ದಿವ್ಯ ಆಡಂಬರ ಬಲಿಪೂಜೆಯನ್ನು ರೇ.ಪಾ.ಸೂಸೈ ರವರು ನೆರವೇರಿಸಿದರು. ನಂತರ ಕ್ರೈಸ್ತ ಬಾಂದವರು ಮನೆ ಮನೆಗಳಿಂದ ಒಗ್ಗೂಡಿಸಿ ತಂದಿದ ಬಗೆ ಬಗೆಯ ಪುಷ್ಪಗಳನ್ನು ಎಲ್ಲಾರೂ ಕನ್ಯಾಮಾತೆ ಮಯರಿಮ್ಮನವರಿಗೆ ಸಮರ್ಪಿಸಿದರು.

Share this article