ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಶ್ರೀಕೃಷ್ಣ ರಾಜೇಂದ್ರ ಸಹಕಾರ ಸಂಘದ ಕಟ್ಟಡದಲ್ಲಿ ಧ್ವಜಾರೋಹಣ ನೆರವೇರಿಸಿ ಸಪ್ತಾಹ ಆಚರಿಸಿ ಮಾತನಾಡಿ, ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎನ್ನುವ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ. ಸಂಘದ ಕಟ್ಟಡದಲ್ಲಿ ಸಹಕಾರ ಧ್ವಜಾರೋಹಣ ನೆರವೇರಿಸಿದ್ದು, ನ.20ರ ವರೆಗೆ ಸಪ್ತಾಹ ಅಚರಣೆ ಮಾಡಲಾಗುತ್ತಿದೆ ಎಂದರು.
ಈ ವೇಳೆ ಉಪಾಧ್ಯಕ್ಷ ಎನ್. ರಾಮಚಂದ್ರ, ನಿರ್ದೇಶಕರಾದ ಎಸ್.ಕೆ ಕುಬೇರ್ಸಿಂಗ್, ಕೆ.ಲಿಂಗಯ್ಯ, ವಿ.ನಾರಾಯಣ್, ಜಿ.ವಿ ನಾರಾಯಣಸ್ವಾಮಿ, ಎಸ್.ರಘು, ಭಾನುಮತಿ ಚಂದ್ರಶೇಖರ್, ಸಾಯಿಲೀಲ, ಶ್ರೀಕಂಠ, ಸಂಘದ ಸಿಇಒ ವಸಂತ್ಕುಮಾರ್ ಹಾಗೂ ಸಿಬ್ಬಂದಿ ಹಾಜರಿದ್ದರು.ರೌಡಿಶೀಟರ್ಗಳ ಪರೇಡ್
ತಾಲೂಕಿನ ಕೆಆರ್ಎಸ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ಗಳ ಪರೇಡ್ ಪೊಲೀಸ್ ಠಾಣಾ ಆವರಣದಲ್ಲಿ ನಡೆಸಲಾಯಿತು.
ನಂತರ ಯಾವುದೇ ಕಾನೂನ ಬಾಹಿರ ಚಟುವಟಿಕೆಗಳು ತೊಡಗದಂತೆ ಎಚ್ಚರಿಕೆ ನೀಡಿ, ಕೃತ್ಯಗಳಲ್ಲಿನ ಸಾಕ್ಷಿಗಳಿಗೆ ಯಾವುದೇ ಬೆದರಿಕಿ ಹಾಕಿದರೆ ಕಠಿಣ ಕ್ರಮ ಜರುಗಿಸುವುದಾಗಿ ತಿಳಿಸಿದರು.