ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಈ ಮೂಲಕ ರಂಜಾನ್ ನಿಮಿತ್ತ ಒಂದು ತಿಂಗಳ ಕಾಲ ಕೈಗೊಂಡಿದ್ದ ಉಪವಾಸ ವ್ರತಾಚರಣೆಯನ್ನು ಅಂತ್ಯಗೊಳಿಸಿದರು. ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ,ಅರಬ್ ರಾಷ್ಟ್ರಗಳ ಮಾದರಿಯಲ್ಲಿ ರುಮಾಲು ಸುತ್ತಿದ್ದ ಚಿಣ್ಣರು,ಯುವಕರು ಎಲ್ಲರ ಗಮನ ಸೆಳೆದರು.
ಸಾಮೂಹಿಕ ಪ್ರರ್ಥನೆ ಬಳಿಕ ಪರಸ್ಪರ ಆಲಂಗಿಸಿಕೊಂಡು ‘ಈದ್ ಮುಬಾರಕ್’ ಎಂದು ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ನಂತರ ಸ್ನೇಹಿತರು ಹಾಗೂ ಸಂಬಂಧಿಕರ ಮನೆಗಳಿಗೆ ತೆರಳಿ,ರಂಜಾನ್ ಹಬ್ಬದ ಶುಭಶಯ ವಿನಿಮಯ ಮಾಡಿಕೊಂಡರು.ಹಬ್ಬದ ನಿಮಿತ್ತ ಮನೆಗಳಲ್ಲಿ ಗೋಡಂಬಿ, ಪಿಸ್ತಾ, ಬಾದಾಮ, ಕೇರಬೀಜ ಮತ್ತಿತರ ಪದಾರ್ಥಗಳೊಂದಿಗೆ ತಯಾರಿಸಿದ ಸುರಕುಂಬ(ಪಾಯಸ) ಸವಿದರು. ಅಕ್ಕಪಕ್ಕದ ಮನೆಯವರಿಗೂ ಸುರಕುಂಬ ನೀಡಿ,ಸೌಹಾರ್ದತೆ ಮೆರೆದರು.
ಹಬ್ಬದ ಪ್ರಯುಕ್ತ ಡಿವೈಎಸ್ಪಿ ಎಸ್.ಶಿವಕುಮಾರ್ ನೇತೃತ್ವದಲ್ಲಿ ನಗರ ಪೋಲಿಸ್ ಠಾಣೆ ಮತ್ತು .ಸಂಚಾರಿ ಪೋಲಿಸ್ ಠಾಣೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೋಲಿಸರಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.