ಕನ್ನಡಪ್ರಭ ವಾರ್ತೆ ಮಳವಳ್ಳಿ
ದಿವ್ಯ ಬ್ರಹ್ಮ ರಥೋತ್ಸವದ ಅಂಗವಾಗಿ ಮಾರೇಹಳ್ಳಿಯಲ್ಲಿ ವಿರಾಜಮಾನರಾಗಿ ಗಜಾರಣ್ಯ ಕ್ಷೇತ್ರದಲ್ಲಿ ಶ್ರೀಯಃ ಪತಿಯಾಗಿ ಕಲ್ಯಾಣಗುಣ ಪರಿಪೂರ್ಣನಾಗಿ, ಭಕ್ತಾನುಗ್ರಾಹಕನಾಗಿಯೂ ಅವತರಿಸಿ ವೀರಾಜಿಸುತ್ತಿರುವ ಶ್ರೀ ಲಕ್ಷ್ಮಿನರಸಿಂಹಸ್ವಾಮಿಗೆ ಹೋಮ ಹವನ ಅಭಿಷೇಕ ನಡೆದ ಬಳಿಕ ವಿವಿಧ ಹೂಗಳಿಂದ ಆಲಂಕರಿಸಿ ವಿಶೇಷ ಪೂಜಾ ಕೈಂಕರ್ಯಗಳು ವಿಧಿ ವಿಧಾನಗಳಿಂದ ನೆರೆವೇರಿಸಲಾಯಿತು.ಸ್ವಾಮಿಯ ಬ್ರಹ್ಮ ರಥೋತ್ಸವಕ್ಕೆ ವಿವಿಧ ಬಣ್ಣದ ಬಟ್ಟೆ ಹಾಗೂ ಹೂಗಳಿಂದ ಆಲಂಕರಿಸಲಾಗಿತ್ತು. ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಉತ್ಸವ ಮೂರ್ತಿಯನ್ನು ಮಂಗಳ ವಾದ್ಯದೊಂದಿಗೆ ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ರಥದ ಸಮೀಪ ಕರೆತರಲಾಯಿತು.
ಶಾಸಕರಿಂದ ಚಾಲನೆ:ಶಾಸಕ ಪಿ.ಎಂ ನರೇಂದ್ರಸ್ವಾಮಿ ಕುಟುಂಬ ಸಮೇತ ದೇವಸ್ಥಾನಕ್ಕೆ ಆಗಮಿಸಿ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು. ಬಳಿಕ ಸ್ವಾಮಿ ಉತ್ಸವ ಮೂರ್ತಿಯನ್ನು ಬ್ರಹ್ಮರಥಕ್ಕೆ ಪ್ರತಿಷ್ಠಾಪಿಸಿದ ನಂತರ ರಥೋತ್ಸವಕ್ಕೆ ಪಿ.ಎಂ ನರೇಂದ್ರಸ್ವಾಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಗೋವಿಂದ ನಾಮ ಘೋಷಣೆ:
ದೇವಸ್ಥಾನಕ್ಕೆ ಆಗಮಿಸಿದ್ದ ಎಲ್ಲಾ ಭಕ್ತರಿಗೂ ಹರಕೆವೊತ್ತ ಭಕ್ತರು ಪ್ರಸಾಧ ವಿತರಿಸಿದರು. ಸೇವಾರ್ಥಗಾರರಿಂದ ಪುಷ್ಪಲಂಕಾರ, ಯತ್ರಾದಾನ ಮಂಟಪೋತ್ಸವ, ನಿವೇದನ ಕಾರ್ಯಕ್ರಮಗಳು ನಡೆದರು.ಜಾತ್ರೆ ವೇಳೆ ಮಾವು, ತಿಂಡಿ ತಿಸಿಸು, ಮಕ್ಕಳ ಆಟದ ವಸ್ತುಗಳು, ಪೂಜಾ ಸಾಮಾಗ್ರಿಗಳ ವ್ಯಾಪಾರ ಭರ್ಜರಿಯಾಗಿಯೇ ನಡೆಯಿತು. ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಶಾಸಕ ಪಿ.ಎಂ ನರೇಂದ್ರಸ್ವಾಮಿ ಮಾತನಾಡಿ, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಸರ್ವರಿಗೂ ಒಳ್ಳೆಯದನ್ನು ಉಂಟು ಮಾಡಲಿ, ನಾಡಿಗೆ ಮಳೆ ಬೆಳೆ ಸಮೃದ್ದಿಯಾಗಿ ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಆಶಿಸಿದರು. ಈ ವೇಳೆ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಕುಮಾರ್ ಸೇರಿ ವಿವಿಧ ಪಕ್ಷಗಳ ರಾಜಕೀಯ ಮುಖಂಡರು ಹಾಜರಿದ್ದರು.