ಆರ್‌ಸಿಬಿ ಗೆಲುವಿಗೆ ಬೆಳಗಾವಿಯಲ್ಲಿ ಸಂಭ್ರಮ

KannadaprabhaNewsNetwork |  
Published : Jun 05, 2025, 12:50 AM IST
ಆರ್‌ಸಿಬಿ ತಂಡ ಗೆಲ್ಲುತ್ತಿದ್ದಂತೆಯೇ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಜನರನ್ನು ಪೊಲೀಸರು ಚದುರಿಸದರು | Kannada Prabha

ಸಾರಾಂಶ

ಚನ್ನಮ್ಮ ವೃತ್ತದ ಬಳಿ ಕನ್ನಡಸಾಹಿತ್ಯ ಭವನದ ಆವರಣದಲ್ಲಿ ಬಿಗ್‌ ಸ್ಕ್ರೀನ್‌ನಲ್ಲಿ ಪಂದ್ಯ ನೋಡಲು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕುಣಿದು ಕುಪ್ಪಳಿಸಿ, ಸಂಭ್ರಮಿಸಿದರು. ಐಪಿಎಲ್‌ ಪಂಜಾಬ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವೆ ನಡೆದ ಅಂತಿಮ ಪಂದ್ಯದದ ಹಿನ್ನೆಲೆಯಲ್ಲಿ ನಗರದ ಗಲ್ಲಿ ಗಲ್ಲಿಯಲ್ಲಿ ಸಂಭ್ರಮ ಮನೆ ಮಾಡಿತ್ತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಚನ್ನಮ್ಮ ವೃತ್ತದ ಬಳಿ ಕನ್ನಡಸಾಹಿತ್ಯ ಭವನದ ಆವರಣದಲ್ಲಿ ಬಿಗ್‌ ಸ್ಕ್ರೀನ್‌ನಲ್ಲಿ ಪಂದ್ಯ ನೋಡಲು ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆಯೇ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಕುಣಿದು ಕುಪ್ಪಳಿಸಿ, ಸಂಭ್ರಮಿಸಿದರು. ಐಪಿಎಲ್‌ ಪಂಜಾಬ್‌ ಕಿಂಗ್ಸ್‌ ಮತ್ತು ಆರ್‌ಸಿಬಿ ನಡುವೆ ನಡೆದ ಅಂತಿಮ ಪಂದ್ಯದದ ಹಿನ್ನೆಲೆಯಲ್ಲಿ ನಗರದ ಗಲ್ಲಿ ಗಲ್ಲಿಯಲ್ಲಿ ಸಂಭ್ರಮ ಮನೆ ಮಾಡಿತ್ತು.

ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಐಪಿಎಲ್-2025​ ಚಾಂಪಿಯನ್​ ಆಗಿ ಗೆಲುವು ಸಾಧಿಸುತ್ತಿದ್ದಂತೆಯೇ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭ್ರಮಾಚರಣೆಗೆ ಸೇರಿದ್ದ ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರ ಸಂಭ್ರಮಕ್ಕೆ ಪಾರವೇ ಇರಲಿಲ್ಲ. ಕೇಕೆ ಹಾಕುತ್ತ, ಈ ಸಲ ಕಪ್ಪ ನಮ್ದೆ ಆಯ್ತು.. ಎಂದು ಘೋಷಣೆ ಕೂಗಿದರು. ಆರ್‌ಸಿಬಿ ತಂಡದ ಪರವಾಗಿ ಘೋಷಣೆ ಹಾಕಿದರು. ಜನರ ಸಂಭ್ರಮ ಮುಗಿಲು ಮುಟ್ಟಿತ್ತು. ಸಿಡಿಮದ್ದುಗಳ ಆರ್ಭಟವೂ ಜೋರಾಗಿತ್ತು. ನಗರದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭ್ರಮಾಚರಣೆಗೆ ಸೇರಿದ್ದ ಸಹಸ್ರಾರು ಜನರು ರಾತ್ರಿ 1 ಗಂಟೆಯಾದರೂ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ನೂಕು ನುಗ್ಗಲು ಉಂಟಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಿದರು. ಪೊಲೀಸ್‌ ಲಾಠಿ ಏಟಿನಿಂದ ತಪ್ಪಿಸಿಕೊಳ್ಳಲು ಜನರು ದಿಕ್ಕಾಪಾಲಾಗಿ ಅಲ್ಲಿಂದ ಓಡಿ ಹೋದರು. ಕೆಲವರು ನೆಲಕ್ಕೆ ಬಿದ್ದರು. ಟಿಳಕವಾಡಿಯಲ್ಲಿಯೂ ಜನರು ಸಂಭ್ರಮಾಚರಣೆ ತಡರಾತ್ರಿವರೆಗೂ ಮುಂದವರೆದಿರುವುದರಿಂದ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿ, ಜನರನ್ನು ಚದುರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ