ಧಾರವಾಡ: ಮನೆಯೊಳಗೆ ಕುಳಿತು ಸಮಾಜ ಒಡೆಯಲು ರೂಪಿಸಿದ ಕುತಂತ್ರದ ಕೂಸೇ ಈ ಸಿದ್ದರಾಮಯ್ಯನವರ ಸರ್ಕಾರ ನಡೆಸಿದ ಜಾತಿಗಣತಿ ಎಂದು ಶಾಸಕ ಅರವಿಂದ ಬೆಲ್ಲದ ಜಾತಿ ಗಣತಿಯನ್ನು ಕಟುವಾಗಿ ಟೀಕಿಸಿದ್ದಾರೆ.
66.35 ಲಕ್ಷ ಲಿಂಗಾಯತರು ಹಾಗೂ 10.49 ಲಕ್ಷ ವೀರಶೈವ ಲಿಂಗಾಯತರನ್ನಾಗಿ ಪ್ರತ್ಯೇಕಿಸಿ, ಬಣಜಿಗ, ಗಾಣಿಗ, ಸಾದರ, ಉಪ್ಪಾರ, ಕುಡು ಒಕ್ಕಲಿಗ, ಜಂಗಮ ಸೇರಿದಂತೆ ಇತ್ಯಾದಿಗಳನ್ನು ಉಪಪಂಗಡಗಳನ್ನು ವಿಭಜಿಸಿ, ಲಿಂಗಾಯತ ಸಮಾಜದ ಅಸ್ತಿತ್ವವನ್ನೇ ದುರ್ಬಲಗೊಳಿಸಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ. ಇದು ಸಾಮಾಜಿಕ ನ್ಯಾಯ ಒದಗಿಸಲು, ನೀತಿ ರೂಪಿಸಲು ಮಾಡಿದ ಗಣತಿ ಅಲ್ಲ, ಇದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಹೂಡಿರುವ ಕುತಂತ್ರದ ಮುಂದುವರೆದ ಭಾಗ!
ಸಿದ್ದರಾಮಯ್ಯನವರು ತಮ್ಮ ಕಳೆದ ಅವಧಿಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯಲು ಮಾಡಿದ ಯತ್ನ ವಿಫಲವಾದುದರಿಂದ, ಈ ಬಾರಿ ಗಣತಿಯ ಹೆಸರಿನಲ್ಲಿ ಮತ್ತೊಮ್ಮೆ ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ. ಇಂತಹ ಅವೈಜ್ಞಾನಿಕ, ಅಪಾರದರ್ಶಕ ವರದಿಯ ಮೂಲಕ, ಸಾಮಾಜಿಕ ನ್ಯಾಯದ ಹೆಸರಿನಲ್ಲಿ ಹೊಸ ಅಸಮಾನತೆಯನ್ನು ಸೃಷ್ಟಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವುದು ನಮ್ಮೆಲ್ಲರಿಗೂ ಎಚ್ಚರಿಕೆಯ ಘಂಟೆ ಎಂದು ಬೆಲ್ಲದ ತೀಕ್ಷ್ಮವಾಗಿ ಪ್ರತಿಕ್ರಯಿಸಿದ್ದಾರೆ.ಜಾತಿ ಗಣತಿ ಒಪ್ಪುವ ಪ್ರಶ್ನೆಯೇ ಇಲ್ಲ: ಟೆಂಗಿನಕಾಯಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಕೇಂದ್ರ ಸರ್ಕಾರದಿಂದ ಆಗಬೇಕು. ರಾಜ್ಯ ಸರ್ಕಾರಕ್ಕೆ ಜಾತಿಗಣತಿ ಮಾಡಲು ಪರವಾನಗಿ ಇಲ್ಲ. ಸಿಎಂ ಸಿದ್ದರಾಮಯ್ಯ ಅವರು ಇಂತಹ ಹೊಸ ಹೊಸ ಮುಖಗಳ ಹುಡಕಾಟದಲ್ಲಿಯೇ ಇರುತ್ತಾರೆ ಎಂದು ದೂರಿದರು.ಇನ್ನೊಂದೆಡೆ ಜಾತಿಗಣತಿ ವರದಿಗೆ ರಾಜ್ಯದೆಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಸಂದರ್ಭದಲ್ಲಿ ಇದನ್ನು ವಿಷಯಾಂತರ ಮಾಡಲು ಇಡಿ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲು ಯೋಜಿಸಲಾಗುತ್ತಿದೆ. ಆ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಮಾಡುತ್ತಲೇ ಬಂದಿದೆ ಎಂದು ಕಿಡಿಕಾರಿದರು.