ಫೆಬ್ರವರಿ 14ರಿಂದ ಆರ್ಯವೈಶ್ಯ ಸಮಿತಿಯ ಶತಮಾನೋತ್ಸವ: ಡಿ.ಎಸ್. ಅರುಣ್

KannadaprabhaNewsNetwork |  
Published : Feb 13, 2025, 12:49 AM IST
ಪೊಟೋ: 12ಎಸ್‌ಎಂಜಿಕೆಪಿ02ಶಿವಮೊಗ್ಗದ ಪತ್ರಿಕಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರ್ಯವೈಶ್ಯ ಮಹಾಜನ ಸಮಿತಿಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಮಾತನಾಡಿದರು. | Kannada Prabha

ಸಾರಾಂಶ

ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಫೆ.14ರಿಂದ 16ರವರೆಗೆ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.

ಸುವರ್ಣ ಸೀರೆ ಸಮರ್ಪಣೆ । 3 ದಿನ ನಡೆವ ಕಾರ್ಯಕ್ರಮ । ವಾಸವಿ ಚರಿತ್ರೆ ಪಾರಾಯಣದ ಸಮಾರೋಪ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಫೆ.14ರಿಂದ 16ರವರೆಗೆ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.

ನಗರದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಆರ್ಯವೈಶ್ಯ ಮಹಾಜನ ಸಮಿತಿಯು ಹಲವು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದ್ದು, ಈಗ ಶತಮಾನೋತ್ಸವದ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದರು.

ಫೆ. 14ರಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನದವರೆಗೆ ಶ್ರೀ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ವಾಸವಿ ವ್ರತ, ಹೋಮ ಹಾಗೂ ಸಮಾಜದ ಪದ್ಧತಿಯಂತೆ 102 ದಂಪತಿಯೊಂದಿಗೆ 102 ದಿನಗಳ ವಾಸವಿ ಚರಿತ್ರೆ ಸಾಮೂಹಿಕ ಪಾರಾಯಣದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಸಂಜೆ 2 ಗಂಟೆಗೆ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಮುಂಭಾಗ ದೀಪೋತ್ಸವ ಮತ್ತು ಆಶೀರ್ವಚನವನ್ನು ಏರ್ಪಡಿಸಲಾಗಿದೆ ಎಂದರು.

ಫೆ. 15 ರಂದು ಬೆಳಿಗ್ಗೆ 7.30 ರಿಂದ ಮಧ್ಯಾಹ್ನ 1.30 ರವರೆಗೆ ಷಷ್ಠಿಪೂರ್ತಿ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್‍ಯಕ್ರಮದಲ್ಲಿ ಮದುವೆಯಾಗಿ 60 ವರ್ಷ ತುಂಬಿದ 27 ದಂಪತಿಗೆ ಷಷ್ಠಿ ಪೂರ್ತಿಯನ್ನು ಸಮಿತಿ ವತಿಯಿಂದಲೇ ಆಚರಿಸಲಾಗುವುದು. ಹಾಗೆಯೇ ಸಮಜೆ 6ಗಂಟೆಗೆ ದೇವಸ್ಥಾನದ ಮುಂಭಾಗ ಅಮ್ಮನವರಿಗೆ ವಿಶೇಷ ಉಯ್ಯಾಲೋತ್ಸವ ನಡೆಯಲಿದೆ. 7.30ಕ್ಕೆ ಬೆಂಗಳೂರಿನ ವಾಸವಿ ಪೀಠಂನ ಪೀಠಾಧ್ಯಕ್ಷ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನಡೆಯಲಿದೆ ಎಂದರು.

ಫೆ. 16ರಂದು ಬೆಳಿಗ್ಗೆ 8 ಗಂಟೆಗೆ ಅಮ್ಮನವರಿಗೆ ಸುಮಾರು ಅರ್ಧ ಕೆಜಿ ಬಂಗಾರವಿರುವ 35 ಲಕ್ಷ ರು. ಬೆಲೆ ಬಾಳುವ ಬಂಗಾರದ ಸೀರೆ ಸಮರ್ಪಿಸಲಾಗುವುದು. ನಂತರ 9 ಗಂಟೆಗೆ ಭವ್ಯ ಮೆರವಣಿಗೆ ಮೂಲಕ ಶತಮಾನೋತ್ಸವದ ಸಮಾರೋಪ ಸಮಾರಂಭ ನಡೆಯುವ ಕುವೆಂಪು ರಂಗಮಂದಿರಕ್ಕೆ ತೆರಳಲಾಗುವುದು ಎಂದರು.

ಬೆಳಿಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಶತಮಾನೋತ್ಸವ ಸಮಾರಂಭವನ್ನು ಬೆಂಗಳೂರಿನ ಬ್ರಿಗೇಡ್ ಗ್ರೂಪ್ ಸಿಎಂಡಿ ಎಂ.ಆರ್.ಜೈಶಂಕರ್ ಉದ್ಘಾಟಿಸುವರು. ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಧನಂಜಯ ಸರ್ಜಿ, ಡಿ.ಎಸ್. ಅರುಣ್, ಆರ್ಯ ವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ. ರವಿಶಂಕರ್, ಜಿಲ್ಲಾಧ್ಯಕ್ಷ ಭೂಪಾಳಂ ಎಸ್. ಶಶಿಧರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸಂಜೆ 5.30ಕ್ಕೆ ಮಂಜರಿ ಚಂದ್ರ ಪುಷ್ಪರಾಜ್ ಅವರ ನೇತೃತ್ವದಲ್ಲಿ ನೃತ್ಯ, ಮತ್ತು ಶಿವಮೊಗ್ಗದ ಸಹಚೇತನ ನಾಟ್ಯಾಲಯದ ವತಿಯಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಆರ್ಯವೈಶ್ಯ ಮಹಾಜನ ಸಮಿತಿ ಜಿಲ್ಲಾಧ್ಯಕ್ಷ ಭೂಪಾಳಂ ಎಸ್. ಶಶಿಧರ್, ಪದಾಧಿಕಾರಿಗಳಾದ ಎಸ್.ಜೆ. ಅಶ್ವತ್ಥನಾರಾಯಣ್, ಡಿ.ಎಸ್. ಶ್ರೀನಾಥ್, ಕೆ.ಜಿ. ರಮೇಶ್, ಸಿ.ಎ. ನರೇಶ್, ಕಾಂತೇಶ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''