ಕೊಡಗು ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಕೇಂದ್ರದ ಭರವಸೆ

KannadaprabhaNewsNetwork |  
Published : Jun 19, 2025, 11:51 PM IST
ಚಿತ್ರ :  19ಎಂಡಿಕೆ3 : ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದ ಯದುವೀರ್ ಒಡೆಯರ್.  | Kannada Prabha

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ಸಂಸದರು ವಿವರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹುಗ್ರಾಮ ಸ್ಕೀಂ (ಎಂವಿಎಸ್‌)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ್‌ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ಸಂಸದರು ವಿವರಿಸಿದ್ದಾರೆ.

ಈ ಸಂಬಂಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇದಕ್ಕೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅತಿ ಶೀಘ್ರದಲ್ಲೇ ಪರಿಹಾರವಾಗಲಿದೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!