ಕನ್ನಡಪ್ರಭ ವಾರ್ತೆ ಶಿವಮೊಗ್ಗ ಅಭಿವೃದ್ಧಿ ಭಾರತ ನಿರ್ಮಾಣದ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಪೂರಕವಾದ ಬಜೆಟ್ಅನ್ನು ಕೇಂದ್ರ ಸರ್ಕಾರ ಮಂಡಿಸಿದೆ ಎಂದು ರಾಷ್ಟ್ರೀಯ ರಕ್ಷಾ ಯುನಿವರ್ಸಿಟಿ ನಿರ್ದೇಶಕ ಡಾ.ರಮಾನಂದ ಘಾರ್ಗೆ ಅಭಿಪ್ರಾಯಪಟ್ಟರು.
ಮೇಲ್ಛಾವಣಿ ಸೌರಶಕ್ತಿ ಬಳಕೆ ಮೂಲಕ ಒಂದು ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಪಡೆಯುವ ಯೋಜನೆ ರೂಪಿಸಲಾಗಿದೆ. ರೈಲ್ವೇ ಪ್ರಯಾಣಿಕರ ಸುರಕ್ಷತೆ, ಅನುಕೂಲತೆ ಮತ್ತು ಸೌಕರ್ಯವನ್ನು ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ವಜ್ರ ಮಹೋತ್ಸವ ಆಚರಿಸುತ್ತಿರುವ ಸಂಘವು ನಿರಂತರವಾಗಿ ವಿಶೇಷ ಉಪನ್ಯಾಸ, ಸಂವಾದ ಹಾಗೂ ಅರಿವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಉದ್ಯಮಿಗಳಿಗೆ ಬಜೆಟ್ನಿಂದ ಆಗುವ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನವನ್ನು ಪ್ರತಿ ವರ್ಷ ಮಾಡಿಕೊಂಡು ಬಂದಿದೆ ಎಂದು ತಿಳಿಸಿದರು.ಲೆಕ್ಕ ಪರಿಶೋಧಕ ಕೆ.ಲಕ್ಷ್ಮಣ ರಾವ್ ಅವರು ಎಂಎಸ್ಎಂಇ ಕ್ಷೇತ್ರದಲ್ಲಿ ಬಜೆಟ್ ಪರಿಣಾಮ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ತೆರಿಗೆ ಸಲಹಾ ಸಮಿತಿ ಚೇರ್ಮನ್ ಇ.ಪರಮೇಶ್ವರ್ ಪ್ರಾಸ್ತಾವಿಕ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಉದ್ಯಮಿಗಳು ಉಪಸ್ಥಿತರಿದ್ದರು.