ಸಶಸ್ತ್ರ ಪಡೆಗೆ ಸಾವಯವ ಆಹಾರಪೂರೈಕೆಗೆ ಕೇಂದ್ರ ಒತ್ತು: ಜೋಶಿ

KannadaprabhaNewsNetwork |  
Published : May 01, 2026, 01:45 AM IST
ಜೋಶಿ | Kannada Prabha

ಸಾರಾಂಶ

ದೇಶದ ಸಶಸ್ತ್ರ ಪಡೆಗಳಿಗೆ ಸಾವಯವ ಪೂರಿತ ಆಹಾರ ಪೂರೈಕೆಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ‘ಭಾರತ್ ಬ್ರ್ಯಾಂಡ್’ ಪೌಷ್ಟಿಕ ಆಹಾರ, ಬಾಸ್ಮತಿ ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

ಕನ್ನಡಪ್ರಭ ವಾರ್ತೆ ನವದೆಹಲಿ

ದೇಶದ ಸಶಸ್ತ್ರ ಪಡೆಗಳಿಗೆ ಸಾವಯವ ಪೂರಿತ ಆಹಾರ ಪೂರೈಕೆಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ‘ಭಾರತ್ ಬ್ರ್ಯಾಂಡ್’ ಪೌಷ್ಟಿಕ ಆಹಾರ, ಬಾಸ್ಮತಿ ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.

ದೆಹಲಿಯ ಕೃಷಿ ಭವನದಲ್ಲಿ ಗುರುವಾರ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಅವರು ಈ ಸಂಬಂಧ ಭಾರತೀಯ ಸೇನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪೌಷ್ಟಿಕ ಆಹಾರ ಪೂರೈಕೆ ಬಗ್ಗೆ ಚರ್ಚಿಸಿದರು.

ಸಶಸ್ತ್ರ ಪಡೆಗಳಿಗೆ ಗುಣಮಟ್ಟದ ಮತ್ತು ಸಾವಯವ ಪಡಿತರ ಆಹಾರ ಧಾನ್ಯ ಪೂರೈಸುವ ಬಗ್ಗೆ ಗಮನ ಹರಿಸಿದ ಸಚಿವರು, ‘ಭಾರತ್ ಬ್ರ್ಯಾಂಡ್’ ಅಕ್ಕಿ ಮತ್ತು ಗೋಧಿ ಉತ್ಪನ್ನ ಸರಬರಾಜು ಕುರಿತು ಮಹತ್ವದ ಚರ್ಚೆ ನಡೆಸಿದರು. ಅಕ್ಕಿ ಮತ್ತು ಗೋಧಿಯಂತಹ ಭಾರತ್ ಬ್ರ್ಯಾಂಡ್ ಉತ್ಪನ್ನಗಳ ಬಳಕೆ ಜತೆಗೆ ಉತ್ತಮ ಗುಣಮಟ್ಟದ ಬಾಸ್ಮತಿ ಅಕ್ಕಿ ಸಂಗ್ರಹಣೆ ಸೇರಿ ಸಶಸ್ತ್ರ ಪಡೆಗಳಿಗೆ ಅಗತ್ಯವಿರುವ ವಸ್ತುಗಳ ಖರೀದಿ ಕುರಿತು ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದರು.

ಸಶಸ್ತ್ರ ಪಡೆಗಳಿಗೆ ಪರಿಣಾಮಕಾರಿಯಾಗಿ ಪೌಷ್ಟಿಕ ಆಹಾರ ಪೂರೈಕೆ ಮತ್ತು ಸಹಕಾರಿ ಸಂಸ್ಥೆಗಳ ಮೂಲಕ ಸ್ಕೇಲಿಂಗ್ ಸಂಗ್ರಹಣೆ ಕುರಿತು ಸಚಿವರು ಮತ್ತು ಅಧಿಕಾರಿಗಳು ಸಮಾಲೋಚನೆ ನಡೆಸಿದರು.

ರೈತರನ್ನು ಪ್ರೋತ್ಸಾಹಿಸಲು, ಬೆಂಬಲಿಸಲು ಮತ್ತು ಸಶಸ್ತ್ರ ಪಡೆಗಳಿಗೆ ಉತ್ತಮ ಗುಣಮಟ್ಟದ, ಪೌಷ್ಟಿಕ ಆಹಾರ ಪೂರೈಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನು ಅಧಿಕಾರಿಗಳಿಗೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಜನಾಕ್ರೋಶ ಪಾದಯಾತ್ರೆ, ಪ್ರತಿಭಟನಾ ಸಭೆ
ಮಳೆ ನಿಂತರೂ ನಿಲ್ಲದ ಬೆಂಗಳೂರು ಜನರ ಗೋಳು