ಉಡುಪಿ: ಇಲ್ಲಿನ ಕಳ್ತೂರು ಗ್ರಾಮ ಗ್ರಾಮ ಪಂಚಾಯಿತಿ ಕೆಂಜೂರಿನಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಶಾಸಕರಾದ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.
ಸಮಾರಂಭದಲ್ಲಿ ಮಾಜಿ ಜಿ ಪಂ ಸದಸ್ಯರಾದ ಪ್ರತಾಪ ಹೆಗ್ಡೆ ಮಾರಾಳಿ, ವೈದ್ಯಾಧಿಕಾರಿ ಡಾ. ಸವಿತಾ ಕುಂದರ್, ಸ್ಥಳೀಯ ಮುಖಂಡರಾದ ಆದರ್ಶ್ ಶೆಟ್ಟಿ ಕೆಂಜೂರು, ದಿನೇಶ ಶೆಟ್ಟಿ, ರಮಾನಂದ ಶೆಟ್ಟಿ, ನಾಗೇಶ ನಾಯಕ್, ಉಷಾ ಪೂಜಾರಿ, ಮನೋಜ ಕುಮಾರ್, ಹರೀಶ ಶೆಟ್ಟಿ, ರವಿಂದ್ರ ಪೂಜಾರಿ, ಉದಯ ಶೆಟ್ಟಿ, ಶಾಂತರಾಜ ಶೆಟ್ಟಿ, ನವೀನ್ಚಂದ್ರ ಶೆಟ್ಟಿ, ನವೀನ್ ಪುತ್ರನ್, ರಘರಾಮ ಶೆಟ್ಟಿ, ಸತೀಶ್ ಶೆಟ್ಟಿ, ಶ್ರೀಕಾಂತ ಆಚಾರ್ಯ, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.