ಕೇಂದ್ರ ಸರ್ಕಾರದಿಂದ ನವಭಾರತ ನಿರ್ಮಾಣದ ಸಂಕಲ್ಪ

KannadaprabhaNewsNetwork |  
Published : Jun 19, 2025, 11:51 PM IST
ಪೋಟೋ: 19ಎಸ್‌ಎಂಜಿಕೆಪಿ02ಶಿವಮೊಗ್ಗ ನಗರದ ದುರ್ಗಿಗುಡಿ ರಾಘವೇಂದ್ರ ಸ್ವಾಮಿ ಮಠದ ಸಮೀಪವಿರುವ ಸರ್ಜಿ ಫರ್ಟಿಲಿಟಿ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾರತಾಂಭೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.  | Kannada Prabha

ಸಾರಾಂಶ

ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಅಭಿಮತ । ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ, ಪ್ರಬುದ್ಧರೊಂದಿಗೆ ಸಂವಾದ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಾವಿರಾರು ಜಾತಿ-ಧರ್ಮವಿರುವ ಭಾರತದಲ್ಲಿ ಅಮೃತಕಾಲ ಬಂದಿದ್ದು, ಸುಭದ್ರ-ಸದೃಢ ಸರ್ಕಾರ ದೇಶದಲ್ಲಿ ಬಂದಿದೆ. ಕೇಂದ್ರ ಸರ್ಕಾರದ ದಿಟ್ಟ ಹೆಜ್ಜೆಗಳು ನವಭಾರತ ನಿರ್ಮಾಣಕ್ಕೆ ಸಂಕಲ್ಪ ಮಾಡಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದ ದುರ್ಗಿಗುಡಿ ರಾಘವೇಂದ್ರ ಸ್ವಾಮಿ ಮಠದ ಸಮೀಪವಿರುವ ಸರ್ಜಿ ಫರ್ಟಿಲಿಟಿ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಬಡವರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿಯವರು ವಿಕಸಿತ ಭಾರತದ ದಾರಿಯಲ್ಲಿದ್ದು, ಇದು ಅಮೃತ ಕಾಲವಾಗಿದೆ ಎಂದರು.

ಸರ್ಕಾರದ ಸಾಧನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ದೇಶವನ್ನು 65 ವರ್ಷ ಆಳಿದ ಕಾಂಗ್ರೆಸ್ ಸರ್ಕಾರ ಜಾತಿ ಜಾತಿಗಳಿಗೆ ಬೆಂಕಿಹಚ್ಚಿ ಬೇಳೆ ಬೇಯಿಸಿಕೊಂಡು, ರಾಜಕಾರಣ ಮಾಡಿರುವ ಕಾಲ ಬೇರೆ. ಯುಪಿಎ ಸರ್ಕಾರದ ಕಾಲದಲ್ಲಿ ನಡೆದ ಭ್ರಷ್ಟಾಚಾರ ದೇಶದ ಜನರಿಗೆ ಅರಿವಿದೆ. ಭ್ರಷ್ಟಾಚಾರ ಮುಕ್ತ ಮೋದಿ ಸರ್ಕಾರ ಮೂರನೇ ಅವಧಿಗೆ ಕಾಲಿಟ್ಟಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಜಾತಿ ಜನಗಣತಿಯನ್ನು ರಿ ಸರ್ವೇ ಮಾಡಲು ಆದೇಶಿಸಿ ಕಾಲಹರಣ ಮಾಡುತ್ತಿದೆ. ಮುಂದೆ ಜಿ.ಪಂ., ತಾ.ಪಂ., ಪಾಲಿಕೆ ಚುನಾವಣೆಗಳು ನಡೆಯಲಿದ್ದು, ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕಾಗಿದೆ. ಅದಕ್ಕಾಗಿಯೇ ಈ ಪ್ರದರ್ಶಿನಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ರಾಜ್ಯ ಶಿಕ್ಷಣ ಪ್ರಕೋಷ್ಠದ ಸಹಸಂಚಾಲಕ ಎಂ.ಜಿ. ಭಟ್ ಮಾತನಾಡಿ, 2014ರಲ್ಲಿ ಯುಪಿಎ ಸರ್ಕಾರದ ಕೊನೆಯ ಅವಧಿಯಲ್ಲಿ ಹಿಂದೂಗಳ ಸ್ವಾತಂತ್ರ ಮುರಿಯುವ ಬಿಲ್ ಮಂಡನೆಗೆ ಸಿದ್ಧವಾಗಿತ್ತು. ಕೋಮುಗಲಭೆಯಾದಲ್ಲಿ ಹಿಂದೂಗಳನ್ನೇ ಟಾರ್ಗೆಟ್ ಮಾಡುವುದು, ಅನ್ಯಕೋಮಿನವರು ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿದಾಗ ಆರೋಪಿಯನ್ನು ಬಂಧಿಸುವ ಬದಲು ಹಿಂದೂ ಹೆಣ್ಣುಮಕ್ಕಳ ಹೇಳಿಕೆಯನ್ನೇ ತೆಗೆದುಕೊಂಡು ಆಕೆಯನ್ನು ಆರೋಪಿ ಎನ್ನುವ ರೀತಿಯಲ್ಲಿ ಬಿಂಬಿಸುವ ಕಾನೂನನ್ನು ತರಲು ಯುಪಿಎ ಸರ್ಕಾರ ಹೊರಟಿತ್ತು. ಆದರೆ ಅದೃಷ್ಟವಶಾತ್ ಅದು ಸಾಧ್ಯವಾಗಲಿಲ್ಲ ಎಂದರು.

1975ರಲ್ಲಿ ಪ್ರಧಾನಿ ಇಂದಿರಾ ಗಾಂಧಿಯವರ ಕುರ್ಚಿಗೆ ಕುತ್ತು ಬಂದಿದೆ ಎಂಬ ಕಾರಣಕ್ಕೆ ತುರ್ತು ಪರಿಸ್ಥಿತಿ ಹೇರಿ ದೇಶದ ಸಾರ್ವಜನಿಕರ ಮೇಲೆ ದಬ್ಬಾಳಿಕೆ ನಡೆಸಿ, ಜೈಲಿಗಟ್ಟುವ ಕೆಲಸ ಮಾಡಿತ್ತು. ವಿದೇಶಗಳಲ್ಲಿ ನಮ್ಮ ನಾಯಕರು ತಲೆತಗ್ಗಿಸಿ ನಿಲ್ಲುತ್ತಿದ್ದರು. ನಮ್ಮನ್ನು ಭಿಕ್ಷುಕರಂತೆ ನೋಡುತ್ತಿದ್ದರು. ಸಾಲ ಕೇಳುವ ದಯನೀಯ ಪರಿಸ್ಥಿತಿ ನಮ್ಮ ದೇಶಕ್ಕಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಲೆ ವಿಶ್ವಮಾನ್ಯತೆ ಲಭಿಸುತ್ತಿದೆ. ಎಲ್ಲಾ ದೇಶಗಳು ನಮ್ಮೆದುರು ತಲೆತಗ್ಗಿಸಿ ನಿಲ್ಲುವ ಪರಿಸ್ಥಿತಿ ಬಂದಿದೆ. ಶ್ರೀಮಂತ ದೇಶಗಳ ಪಟ್ಟಿಗೆ ನಾವು ಸೇರಿದ್ದೇವೆ. ಇದು ಎನ್‍ಡಿಎ ಸರ್ಕಾರದ ಸಾಧನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಯಾದ ಸೋಮಶೇಖರ್, ಮುದ್ರಾ ಯೋಜನೆಯಡಿ ಮುದ್ರಾ ಫಲಾನುಭವಿ ಗುರುರಾಜ್, ಕೇವಲ 3600 ರು. ಕಟ್ಟಿ 80,000 ರು. ಬೆಳೆವಿಮೆ ಪಡೆದ ಯೋಗೇಂದ್ರಾಚಾರ್, ಉಜ್ವಲ ಯೋಜನೆ ಫಲಾನುಭವಿ ಸರೋಜಮ್ಮ, ರೈತ ಪ್ರವೀಣ್‍ ಕುಮಾರ್ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಪ್ರಮುಖರಾದ ಆರ್.ಕೆ. ಸಿದ್ರಾಮಣ್ಣ, ಮೋಹನ್‍ರೆಡ್ಡಿ, ಹರಿಕೃಷ್ಣ, ವಿನ್ಸೆಂಟ್ ರೋಡ್ರಿಗಸ್, ಜ್ಞಾನೇಶ್ವರ್, ಗಣೇಶ್ ಬಿಳಕಿ, ದರ್ಶನ್ ಸೇರಿದಂತೆ ಮತ್ತಿತರರಿದ್ದರು.

----------------

ಶಿವಮೊಗ್ಗ ನಗರದ ದುರ್ಗಿಗುಡಿ ರಾಘವೇಂದ್ರ ಸ್ವಾಮಿ ಮಠದ ಸಮೀಪವಿರುವ ಸರ್ಜಿ ಫರ್ಟಿಲಿಟಿ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರದ 11 ವರ್ಷದ ಸಾಧನೆಯ ಪ್ರದರ್ಶಿನಿ ಮತ್ತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾರತಾಂಭೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಮಲಾಕರ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್‌! - ಖಾಸಗಿ ಕ್ಷಣಗಳ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌
ರಾಜಧಾನಿಯಲ್ಲಿ ಡ್ರಗ್ಸ್ ಬೇಟೆ : ಸಾವಿರ ವ್ಯಸನಿಗಳ ಸೆರೆ