ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಶುಕ್ರವಾರ ಆಯೋಜಿಸಿದ್ದ ‘ಸಸ್ಯ ಪೋಷಕಾಂಶ: ಮಾನವ ಪೌಷ್ಟಿಕತೆ ಮತ್ತು ತಾಂತ್ರಿಕ ನಾನಿನ್ಯತೆ’ ಕುರಿತ ಅಮೃತ ಮಹೋತ್ಸವ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿ, ದೇಶದಲ್ಲಿ ಶೇ. 10 ರಿಂದ 30ರಷ್ಟು ಕೃಷಿ ಬೆಳೆಗಳಲ್ಲಿ ಇಳುವರಿ ಕುಸಿಯುತ್ತಿದೆ. ಪ್ರಮುಖವಾಗಿ ಬಾಳೆ, ಭತ್ತ, ಟೊಮೆಟೊ, ಹತ್ತಿ, ನೆಲಗಡಲೆಗಳು ಹೆಚ್ಚು ಸೋಂಕಿಗೆ ಒಳಗಾಗುತ್ತಿವೆ ಎಂದು ಅವರು ತಿಳಿಸಿದರು.
ವೈರಲ್ ಪೋಟಿನ್ ಬಹುಕಾರ್ಯವಿಧಾನ ಒಳಗೊಂಡಿದ್ದು, ಅವುಗಳ ವಿನ್ಯಾಸ, ಕಾರ್ಯವೈಖರಿಯನ್ನು ಸದಾ ಬದಲಿಸುತ್ತಿರುತ್ತವೆ. ಅವುಗಳನ್ನು ಹತೋಟಿಗೆ ತರಬೇಕೆಂದರೆ ಸಂಶೋಧನೆಯನ್ನು ನಿರಂತರವಾಗಿ ಮುಂದುವರಿಸಬೇಕು ಎಂದು ಅವರು ಸಲಹೆ ನೀಡಿದರು.ಸಿ.ಎಫ್.ಟಿ.ಆರ್.ಐ ನಿವೃತ್ತ ನಿರ್ದೇಶಕ ಪ್ರೊ.ವಿ. ಪ್ರಕಾಶ್ ಮಾತನಾಡಿ, ಜಗತ್ತಿನಲ್ಲಿ ಆಹಾರ ತಂತ್ರಜ್ಞಾನದಲ್ಲಿ ಸಿ.ಎಫ್.ಟಿ.ಆರ್.ಐ ಪಾತ್ರ ಹಿರಿದು. ಜಗತ್ತಿನಲ್ಲಿ ಶಿಶು ಆಹಾರ ಮತ್ತು ಸಿದ್ಧಪಡಿಸಿದ ಆಹಾರ ಆವಿಷ್ಕರಿಸಿದ ಸಂಸ್ಥೆ ಎಂಬ ಹಿರಿಮೆಯೂ ಇದೆ ಎಂದರು.
ಸಂಸ್ಥೆಯ ನಿರ್ದೇಶಕಿ ಪ್ರೊ.ಶ್ರೀದೇವಿ ಅನ್ನಪೂರ್ಣ ಸಿಂಗ್ ಇದ್ದರು.