ಕನ್ನಡಪ್ರಭ ವಾರ್ತೆ ಬಾದಾಮಿ
ಮೋದಿ ಸರ್ಕಾರದ ಸುಳ್ಳು ಭರವಸೆ:
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಬಗ್ಗೆ ಬೇರೆ ರಾಜ್ಯದಲ್ಲಿ ಟೀಕೆ ಮಾಡುವ ಪ್ರಧಾನಿ ಮೋದಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದ್ದರಿಂದ ಟೀಕೆ ಮಾಡಲು ಯಾವುದೇ ವಿಷಯಗಳಿಲ್ಲ. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.ಉಪಚುನಾವಣೆಯಲ್ಲಿ ಮೂರು ಸ್ಥಾನ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ಮೂಲಕ ಸಿದ್ದರಾಮಯ್ಯನವರಿಗೆ ರಾಜ್ಯದ ಜನರು ಬೆಂಬಲ ಸೂಚಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ಗೆ ಜನರು ತಕ್ಕಪಾಠ ಕಲಿಸಿದ್ದಾರೆ ಎಂದರು.
ಐತಿಹಾಸಿಕ ಬಾದಾಮಿ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಶೀಘ್ರದಲ್ಲಿಯೇ ಶಾಸಕ ಭೀಮಸೇನ ಚಿಮ್ಮನಕಟ್ಟಿಯವರೊಂದಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ರಾಜಕೀಯವಾಗಿ ಸಿದ್ದರಾಮಯ್ಯನವರಿಗೆ ಪುನರ್ಜನ್ಮ ನೀಡಿದ ಬಾದಾಮಿ ಮತಕ್ಷೇತ್ರಕ್ಕೆ ರಸ್ತೆ, ಕುಡಿಯುವ ನೀರು, ಪ್ರವಾಸೋದ್ಯಮ ಅಭಿವೃದ್ಧಿ, ಶಾಲೆ, ಸಮುದಾಯ ಭವನ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಹೆಚ್ಚಿನ ಅನುದಾನ ನೀಡಲು ಮನವಿ ಮಾಡುತ್ತೇವೆ ಎಂದರು.
ಒಳಮೀಸಲಾತಿ ಜಾರಿಗೆ ಮನವಿ:ಸುಪ್ರೀಂಕೋರ್ಟ್ ಆದೇಶದಂತೆ ಸಿದ್ದರಾಮಯ್ಯನವರು ಒಳಮೀಸಲಾತಿ ಜಾರಿ ಮಾಡುತ್ತಾರೆ. ಇದರ ಬಗ್ಗೆ ಅನುಮಾನ ಬೇಡ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತರಲು ನಾವು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡುತ್ತೇವೆ ಎಂದರು.
ಗೋಷ್ಠಿಯಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಪುರಸಭೆ ಅಧ್ಯಕ್ಷ ಪಾಂಡಪ್ಪ ಕಟ್ಟೀಮನಿ, ಸದಸ್ಯರಾದ ಮಂಜುನಾಥ ಹೊಸಮನಿ, ಶಂಕರ ಕನಕಗಿರಿ, ರಮೇಶ ಪೂಜಾರ, ನಾಗರಾಜ ಮನ್ನಿಕೇರಿ, ಪ್ರವೀಣಕುಮಾರ ಜ್ಯೋತಿ, ಬಸವರಾಜ ಪಾತ್ರೋಟ, ಬಸವರಾಜ ತಳವಾರ, ಭೀಮಸಿ ಕಮ್ಮಾರ, ಯಲ್ಲಪ್ಪ ಪೂಜಾರಿ, ರಾಮಣ್ಣ ಬೇವಿನಮಟ್ಟಿ ಉಪಸ್ಥಿತರಿದ್ದರು.