ಕನ್ನಡಪ್ರಭ ವಾರ್ತೆ ಉಡುಪಿ
ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನರಿಗೆ ನೀಡಿದ ಭರವಸೆ, ಚುನಾವಣಾ ಪ್ರಣಾಂಕ ಆಧಾರದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅತ್ಯುತ್ತಮ ಬಜೆಟ್ ಮಂಡಿಸಿದ್ದು, ಪ್ರಧಾನಿ ಮೋದಿ ನುಡಿದಂತೆ ನಡೆದಿದ್ದಾರೆ ಎಂದರು.
ಕೃಷಿ ಉತ್ಪಾದನೆ, ಉದ್ಯೋಗ ಕೌಶಲ್ಯ, ಮಾನವ ಸಂಪನ್ಮೂಲ ಅಭಿವೃದ್ಧಿ, ಸಾಮಾಜಿಕ ನ್ಯಾಯ ಉತ್ಪಾದನೆ ಮತ್ತು ಸೇವೆ, ನಗರ ಅಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ, ಅವಿಷ್ಕಾರ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಮಾತನಾಡಿ, ಜುಲೈ 28ರಂದು ಬೆಳಗ್ಗೆ 11 ಗಂಟೆಗೆ ನಡೆಯುವ ಪ್ರಧಾನಿ ನರೇಂದ್ರ ಮೋದಿಯವರ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರವನ್ನು ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಜಿಲ್ಲೆಯ ಎಲ್ಲ 1,111 ಬೂತ್ಗಳಲ್ಲಿ ವೀಕ್ಷಿಸಲಿದ್ದಾರೆ ಎಂದರು.