ಕನ್ನಡಪ್ರಭ ವಾರ್ತೆ ಉಡುಪಿ
ಭಾರತ ಜ್ಞಾನ-ವಿಜ್ಞಾನ ಸಮಿತಿಯ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನಗರದ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿಆರಂಭವಾದ ಎರಡು ದಿನಗಳ ಟೀಚರ್ ಶೈಕ್ಷಣಿಕ ಹಬ್ಬದಲ್ಲಿ ಅವರು ಮಾತನಾಡಿದರು.
ನೂತನ ಎನ್ಇಪಿಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗಲಿದೆ ಮತ್ತು ಸಮಾಜದಲ್ಲಿ ಶೈಕ್ಷಣಿಕ ಅಸಮಾನತೆ ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳಲ್ಲಿ ದೇಶದ ಔಷಧಿ ವಿಜ್ಞಾನ, ವೈದ್ಯಕೀಯ ಶಿಕ್ಷಣ, ಆರೋಗ್ಯ ಕ್ಷೇತ್ರದ ಅಭಿವೃದ್ಧಿಯಿಂದಾಗಿ ನಮ್ಮ ಜೀವಿತಾವಧಿ ಹೆಚ್ಚಾಗಿದೆ. ಆದರೆ ಜನಸಂಖ್ಯೆಯ ಪ್ರಮಾಣದಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚುತ್ತಿಲ್ಲ. ಈಗಲೂ ನಮ್ಮ ದೇಶದಲ್ಲಿ ಶೇ 25ರಷ್ಟು ಜನರು ಅನಕ್ಷರಸ್ಥರಾಗಿದ್ದಾರೆ. ಕಡ್ಡಾಯ ಪ್ರಾಥಮಿಕ ಶಿಕ್ಷಣವು ಜಾರಿಯಾಗಿಲ್ಲ ಎಂದರು.
ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಮಾತನಾಡಿ, ಸರ್ಕಾರದ ನಿರ್ಲಕ್ಷ ನೀತಿಯಿಂದಾಗಿಯೇ ಅನುದಾನಿತ ಶಿಕ್ಷಣ ಸಂಸ್ಥೆಗಳು ಮುಚ್ಚುತ್ತಿವೆ. ಇರುವ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಹೊಸ ನೇಮಕಾತಿ ನಡೆಯುತ್ತಿಲ್ಲ. ಜೊತೆಗೆ ಸರ್ಕಾರಗಳು ಆಂಗ್ಲ ಮಾಧ್ಯಮ ಶಾಲೆಗಳಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿವೆ ಎಂದು ವಿಷಾದಿಸಿದರು.
ಜ್ಞಾನಿವಿಜ್ಞಾನ ಸಮಿತಿ ಕೋಶಾಧಿಕಾರಿ ಪ್ರೊ. ಕಮಲ್ ಲೊಡಾಯ ಅಧ್ಯಕ್ಷತೆ ವಹಿಸಿದ್ದರು. ವಿಷಯ ತಜ್ಞರಾದ ಶುಭಂಕರ್ ಚಕ್ರವರ್ತಿ, ಪ್ರಶಾಂತ್ ಬಾಬು, ಕಾರ್ಯಕ್ರಮದ ಸಂಘಟಕ ಉದಯ್ ಗಾಂವಕರ್, ಅಭಿಲಾಶಾ, ಸಂತೋಷ್ ನಾಯಕ್ ಪಟ್ಲ ಇದ್ದರು.