ಚೆಕ್‌ಪೋಸ್ಟ್‌ಗೆ ಸಿಇಒ ಭೇಟಿ, ಪರಿಶೀಲನೆ

KannadaprabhaNewsNetwork |  
Published : Mar 26, 2024, 01:17 AM IST
ಯಲಗೂರ ಕ್ರಾಸ್ ಬಳಿ ಚೆಕ್ ಪೋಸ್ಟ್ ಗೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಭೇಟಿ, ಪರಿಶೀಲನೆ | Kannada Prabha

ಸಾರಾಂಶ

ವಿಜಯಪುರ: ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ

ಲೋಕಸಭಾ ಚುನಾವಣೆ 2024ರ ಹಿನ್ನೆಲೆ ನಿಡಗುಂದಿ ತಾಲೂಕು ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 50ರ ಹತ್ತಿರ ಯಲಗೂರ ಕ್ರಾಸ್ ಬಳಿ ಚೆಕ್‌ಪೋಸ್ಟ್ ಆರಂಭಿಸಲಾಗಿದ್ದು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯಪುರ ಜಿಲ್ಲೆಯಿಂದ ಬಾಗಲಕೋಟೆ ಜಿಲ್ಲೆಗೆ ಪ್ರವೇಶಿಸಲು ಜಿಲ್ಲಾ ಗಡಿ ಭಾಗ ಚೆಕ್‌ಪೋಸ್ಟ್ ಇದಾಗಿದ್ದು, ಕಂದಾಯ, ಪೊಲೀಸ್, ಕೆಬಿಜೆಎನ್‌ಎಲ್ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಭೇಟಿ ನೀಡಿದ ವೇಳೆ ಮಾತನಾಡಿದ ಜಿಪಂ ಸಿಇಒ ರಿಷಿ ಆನಂದ ಲೋಕಸಭೆ ಚುನಾವಣಾ ನಿಮಿತ್ಯ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಜಿಲ್ಲೆಯಿಂದ ಹೊರಹೋಗುವ ಮತ್ತು ಆಗಮಿಸುವ ಎಲ್ಲ ವಾಹನಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕು. ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳು ಕಂಡುಬಂದರೆ ತಕ್ಷಣ ಮೇಲಾಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳಬೇಕು. ಪ್ರತಿ ವಾಹನ ತಪಾಸಣೆ ಮಾಡಿದ ವರದಿಯನ್ನು ವಹಿಯಲ್ಲಿ ದಾಖಲಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.

ಚೆಕ್ ಪೋಸ್ಟ್ ವಹಿಯಲ್ಲಿ ನೋಂದಣಿ ಮಾಡಿದ ವಾಹನಗಳ ವಿವರಗಳನ್ನು ಖುದ್ದಾಗಿ ಪರಿಶೀಲಿಸಿದರು. ಚೆಕ್ ಪೋಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಸುರಕ್ಷತೆಗೆ ಸಾರಿಗೆ ಇಲಾಖೆ ಎಐ ಆಧರಿತ ಕ್ಯಾಮೆರಾ ಅಳವಡಿಕೆ
ಮಂಡ್ಯ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಸ್ವತಂತ್ರ ಸ್ಪರ್ಧೆ - ಸುಮಲತಾ ಪರ ನಾರಾಯಣಗೌಡ ಬ್ಯಾಟಿಂಗ್‌