ಕನ್ನಡಪ್ರಭ ವಾರ್ತೆ, ಬೀದರ್
ಸುಗಮ ಸಂಗೀತ ಸ್ಪರ್ಧೆಯಲ್ಲಿ ಸಾಕ್ಷಿ ಪ್ರಥಮ :
ಬಿದರಿ ಸುಗಮ ಸಂಗೀತ ಸ್ಪರ್ಧೆಯಲ್ಲಿ ಸಾಕ್ಷಿ (ಪ್ರಥಮ), ಪ್ರತೀಕ್ಷಾ (ದ್ವಿತೀಯ) ಹಾಗೂ ಯುಕ್ತಿ ಅರಳಿ (ತೃತೀಯ) ಬಹುಮಾನ ಪಡೆದರು.ಜಸ್ಕರಣ್ ಸಿಂಗ್ ಪ್ರಮುಖ ಆಕರ್ಷಣೆ :ಬಿದರಿ ಉತ್ಸವ 2024 ರ ಪ್ರಯುಕ್ತ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ (ಡಿ. 15) ಸಂಜೆ 6ಕ್ಕೆ ನಡೆಯಲಿರುವ ಸಂಗೀತ ಸಂಭ್ರಮದಲ್ಲಿ ಖ್ಯಾತ ಕಲಾವಿದರು ಗಾನ ಸುಧೆ ಹರಿಸಲಿದ್ದಾರೆ.ಕೃಷ್ಣಂ ಪ್ರಣಯ ಸಖಿಯ ದ್ವಾಪರ ಹಾಡಿನ ಖ್ಯಾತಿಯ ಪಂಜಾಬ್ನ ಯುವ ಗಾಯಕ ಜಸ್ಕರಣಸಿಂಗ್ ಹಾಗೂ ಬೀದರ್ನ ಖ್ಯಾತ ಗಾಯಕಿ ರೇಖಾ ಸೌದಿ ಪ್ರಮುಖ ಆಕರ್ಷಣೆಯಾಗಲಿದ್ದಾರೆ. ಕಲಾವಿದರಾದ ಶ್ರೀನಾಥ ಕಮಲಾಪುರಕರ್, ರಾಜೇಶ ಕುಲಕರ್ಣಿ ಹಾಗೂ ಅಮಿತ್ ಜನವಾಡಕರ್, ಸಾಕ್ಷಿ, ಪ್ರತೀಕ್ಷಾ, ಯುಕ್ತಿ ಅರಳಿ ಸಹ ಗಾಯನ ಪ್ರಸ್ತುತಪಡಿಸಲಿದ್ದಾರೆ.ಗುರುರಾಜ ಹೊಸಕೋಟೆಗೆ ಬಿದರಿ ದತ್ತಿ ಪ್ರಶಸ್ತಿ :
2024ನೇ ಸಾಲಿನ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿಗೆ ಖ್ಯಾತ ಚಲನಚಿತ್ರ ನಟ ಹಾಗೂ ಜಾನಪದ ಗಾಯಕ ಗುರುರಾಜ ಹೊಸಕೋಟೆ ಅವರನ್ನು ಆಯ್ಕೆ ಮಾಡಲಾಗಿದೆ.ಪ್ರತಿ ವರ್ಷ ಬಿದರಿ ಉತ್ಸವದಲ್ಲಿ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ವರ್ಷದ ಪ್ರಶಸ್ತಿ ನಾಲ್ಕನೆಯದ್ದು ಎಂದು ಬಿದರಿ, ಬೀದರ್ ಜಿಲ್ಲೆಯ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷೆ ರೇಖಾ ಅಪ್ಪಾರಾವ್ ಸೌದಿ ತಿಳಿಸಿದ್ದಾರೆ.ವೈವಿಧ್ಯಮಯ ಕಾರ್ಯಕ್ರಮ ಆಯೋಜನೆ
ಬೀದರ್: ಬಿದರಿ ಉತ್ಸವ ಅಂಗವಾಗಿ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ (ಡಿ.15) ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ.ಸಂಜೆ 5.30ಕ್ಕೆ ನಡೆಯುವ ಬಿದರಿ ಶಹನಾಯಿ ವಾದನ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಮಾರುತಿರಾವ್ ಮುಳೆ ಉದ್ಘಾಟಿಸುವರು. ಗಣ್ಯರು, ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳುವರು. ಸಂಜೆ 6ಕ್ಕೆ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಜ್ಯೋತಿರ್ಮಯಾನಂದ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಬಿದರಿ ಸಂಗೀತ ಸಂಭ್ರಮ ಜರುಗಲಿದೆ. ರಾತ್ರಿ 8.30ಕ್ಕೆ ಜರುಗಲಿರುವ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಉದ್ಘಾಟಿಸುವರು. ಹುಲಸೂರಿನ ಡಾ. ಶಿವಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ಖ್ಯಾತ ಚಲನಚಿತ್ರ ನಟ ಗುರುರಾಜ ಹೊಸಕೋಟೆ ಅವರಿಗೆ ರಾಜ್ಯಮಟ್ಟದ ಬಿದರಿ ದತ್ತಿ ಪ್ರಶಸ್ತಿ ಪ್ರದಾನ, ಅಧಿಕಾರಿಗಳು, ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಬಿದರಿ, ಬೀದರ್ ಜಿಲ್ಲೆಯ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷೆ ರೇಖಾ ಅಪ್ಪಾರಾವ್ ಸೌದಿ ತಿಳಿಸಿದ್ದಾರೆ.