ಕನ್ನಡಪ್ರಭ ವಾರ್ತೆ ಹಿರೇಕೆರೂರು
ಪಟ್ಟಣದ ಸಿಇಎಸ್ ವಿದ್ಯಾ ಸಂಸ್ಥೆಯ ಶಾಂತಿನಿಕೇತನ ಆವರಣದ ಕುವೆಂಪು ಅಡಿಟೋರಿಯಮ್ ನಲ್ಲಿ ನಡೆದ ಪಿಎಚ್ಡಿ ಸಂಶೋಧನಾ ಚಟುವಟಿಕೆಗಳ ಚಾಲನೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನಮ್ಮ ಸಂಸ್ಥೆಯ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದ ನಂತರ ಮೈಸೂರು ಮುಕ್ತ ವಿಶ್ವವಿದ್ಯಾಲಯವು ಪಿಎಚ್ಡಿ ಸಂಶೋಧನಾ ಕೇಂದ್ರವನ್ನು ನೀಡಿದ್ದು, ನಮ್ಮ ಪಿಎಚ್ಡಿ ಸಂಶೋಧನಾ ಕೇಂದ್ರವು ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಮೈಸೂರು ವಿದ್ಯಾಲಯ ಹೊರತು ಪಡಸಿ ರಾಜ್ಯದಲ್ಲಿ ಇರುವ ಏಕೈಕ ಸಂಶೋಧನಾ ಕೇಂದ್ರವಾಗಿದೆ. ದಿವಂಗತ ಡಿ.ಆರ್. ತಂಬಾಕದರವರು 1952 ರಲ್ಲಿ ಮುಂಬೈ ಸಹಕಾರಿ ಸಂಘಗಳ ಕಾನೂನಿನಡಿಯಲ್ಲಿ ಸಹಕಾರಿ ಶಿಕ್ಷಣ ಸಂಸ್ಥೆಯನ್ನು 1 ಧರ್ಮ ಶಾಲೆಯಲ್ಲಿ ಕೇವಲ 7 ವಿದ್ಯಾರ್ಥಿಗಳೊಂದಿಗೆ ಪ್ರಾರಂಭಿಸಿದ ಈ ಸಂಸ್ಥೆ ಇಂದು ಉತ್ತರ ಕರ್ನಾಟಕದಲ್ಲಿಯೇ ಹೆಮ್ಮರವಾದ ಶಿಕ್ಷಣ ಸಂಸ್ಥೆಯಾಗಿ ಬೆಳೆದು ಅದರ ಅಧೀನದಲ್ಲಿ 1 ಪ್ರಾಥಮಿಕ 5 ಪ್ರೌಢಶಾಲೆ | ಪದವಿಪೂರ್ವ ಮಹಾವಿದ್ಯಾಲಯ 1 ಕೈಗಾರಿಕಾ ಮಹಾವಿದ್ಯಾಲಯ 1 ಪದವಿ ಮಹಾವಿದ್ಯಾಲಯ 1 ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಪಿಎಚ್.ಡಿ ಸಂಶೋಧನಾ ಕೇಂದ್ರ | ಶಿಕ್ಷಣ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಯು.ಜಿ ಪಿ.ಜಿ ಹಾಗೂ ಸರ್ಟಿಫಿಕೇಟ್ ಕೋರ್ಸಗಳನ್ನು ಪ್ರಾರಂಭಿಸಿದೆ. ಈ ಸಂಸ್ಥೆಗಳಲ್ಲಿ ಇಂದು 5000 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸಂಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ ಎಂದರು.ಸಂಸ್ಥೆಯ ಅಧ್ಯಕ ಎಸ್.ಬಿ. ತಿಪ್ಪಣ್ಣನವರ ಮಾತನಾಡಿ, ಇಂದು ಅನೇಕರು ಎಂಜಿನಿಯರ ಕಾಲೇಜುಗಳನ್ನು ತರೆದು ನಿರುದ್ಯೋಗ ಸೃಷ್ಠಿ ಮಾಡುತ್ತಿದ್ದಾರೆ. ಆದರೆ ನಮ್ಮ ಸಹಕಾರಿ ವಿದ್ಯಾ ಸಂಸ್ಥೆ ಪಿಎಚ್ಡಿ ಸಂಶೋಧನಾ ಕೇಂದ್ರ ತೆರೆಯವ ಮೂಲಕ ಸಮಾಜಕ್ಕೆ ಹೊಸ ಹೊಸ ಆವಿಷ್ಕಾರಗಳನ್ನು ಕೊಡುಗೆಯಾಗಿ ನೀಡುತ್ತಿದ್ದೇವೆ ಎಂದರು.
23 ಸಂಶೋಧನಾ ವಿದ್ಯಾರ್ಥಿಗಳು ಪ್ರಮಾಣಿಕವಾಗಿ ಶ್ರಮಪಟ್ಟು ಪಿಎಚ್ಡಿ ಪದವಿ ಪಡೆಯಿರಿ ಎಂದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಸ್.ಬಿ. ಚನ್ನಗೌಡ್ರ, ಪಿಎಚ್ಡಿ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ರಂಜೀತ್ ಕುಮಾರ ಹಾಗೂ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.