ಮಾಗಡಿ: ಚಕ್ರಬಾವಿ ವಿಎಸ್ಎಸ್ಎನ್ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ, ಕೂಡಲೇ ಫಲಿತಾಂಶವನ್ನು ತಡೆದು ಮರು ಚುನಾವಣೆ ಮಾಡಬೇಕು, ಈ ಬಗ್ಗೆ ಸಹಕಾರ ಇಲಾಖೆ ಹಾಗೂ ನ್ಯಾಯಲಯಕ್ಕೆ ದೂರು ನೀಡಲಾಗುತ್ತದೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ಹೇಳಿದರು.
ಚುನಾವಣಾಧಿಕಾರಿ ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ಶಾಮಿಲಾಗಿ, ಪೊಲೀಸ್ ಇಲಾಖೆ ಬಳಸಿಕೊಂಡು, ಬೆಂಬಲಿಗರಾದ 25ರಿಂದ 30 ಮತಗಳನ್ನು ಅಕ್ರಮವಾ ಗಿ ತಾವೇ ಹಾಕಿಕೊಂಡು ಚುನಾವಣೆ ಗೆದ್ದಿದ್ದೀರಾ? ಈ ಚುನಾವಣೆ ಪಾರದರ್ಶಕವಾಗಿ ನಡೆಯಲಿಲ್ಲ. ಈ ಬಗ್ಗೆ ಎಆರ್, ಡಿಆರ್, ಜಾಯಿಂಟ್ ರಿಜಿಸ್ಟರ್, ಆರ್ಸಿಎಸ್ವರೆಗೂ ದೂರು ನೀಡಿ ಪಾರದರ್ಶಕ ಚುನಾವಣೆ ನಡೆದಿಲ್ಲ ಫಲಿತಾಂಶ ತಡೆಹಿಡಿದು ಮರು ಚುನಾವಣೆ ನಡೆಸುವಂತೆ ಒತ್ತಾಯಿಸಿ ನ್ಯಾಯಾಲಯದಲ್ಲೂ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಜೆಡಿಎಸ್ ನ ಹಿರಿಯ ಮುಖಂಡ ಏಳಿಗೆಹಳ್ಳಿ ತಮ್ಮಣ್ಣ ಗೌಡ, ವಿಜಯಕುಮಾರ್, ಹೊಸಹಳ್ಳಿ ರಂಗಣಿ, ಕೋರಮಂಗಲ ಶ್ರೀನಿವಾಸ್, ಚಕ್ರಬಾವಿ ಪ್ರಸನ್ನ, ಅರಳುಕುಪ್ಪೆ ಗಿರಿಧರ್, ಬೆಳಗವಾಡಿ ರಂಗಸ್ವಾಮಿ, ಅಂಬಿ ವಿಜಿ, ಮರೂರು ಸಾಗರ್, ರಂಗಸ್ವಾಮಿ, ಕರಡಿ ನಾಗರಾಜು, ಜಯರಾಂ, ಕೆಂಪೇಗೌಡ, ನಾಗರಾಜು ಇತರರಿದ್ದರು.