ಶಿಗ್ಗಾಂವಿ: ಬಂಕಾಪುರ ಪಟ್ಟಣದಲ್ಲಿ ಹಾಯ್ದು ಹೋಗಿರುವ ಇಳಕಲ್-ಕಾರವಾರ ರಾಷ್ಟ್ರೀಯ ಹೆದ್ದಾರಿ ಮದ್ಯದಲ್ಲಿರುವ ದರ್ಗಾ ತೆರವಿಗೆ ಆಗ್ರಹಿಸಿ ಚಲೋ ಬಂಕಾಪುರ ಹೋರಾಟ ನಡೆಸಲಾಗುವುದು ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ತಮ್ಮ ರಾಜಕೀಯ ಲಾಭಕ್ಕಾಗಿ ಇಳಕಲ್-ಕಾರವಾರ ರಾಷ್ಟ್ರೀಯ ಹೆದ್ದಾರಿ ಮದ್ಯದಲ್ಲಿರುವ ದರ್ಗಾವನ್ನು ತಮ್ಮ ಆಡಳಿತಾವಧಿಯಲ್ಲಿ ತೆರವುಗೊಳಿಸಲು ಬೊಮ್ಮಾಯಿ ಮುಂದಾಗಲಿಲ್ಲ ಎಂದು ಆರೋಪಿಸಿದರು.
ನೇಹಾ ಹಿರೇಮಠ ಹಾಗೂ ಇತರ ಹತ್ಯೆ ಪ್ರಕರಣವನ್ನು ಶ್ರೀರಾಮ ಸೇನೆ ಗಂಭೀರವಾಗಿ ತೆಗೆದುಕೊಂಡು ಕೂಡಲೇ ರಾಜ್ಯಮಟ್ಟದ ಸಭೆ ಮಾಡಿ, ನಾಲ್ಕು ಕಡೆ ಸಹಾಯವಾಣಿ ತೆರೆಯಲಾಯಿತು. ಸಹಾಯವಾಣಿ ಆರಂಭಿಸಿದ ನಾಲ್ಕು ದಿನಗಳಲ್ಲಿ ಲವ್ ಜಿಹಾದ್ಗೆ ಸಂಬಂಧಿಸಿದ ಸುಮಾರು ೩೦೦ ಕರೆಗಳು ಬಂದಿವೆ. ಅದರಲ್ಲಿ ಸುಮಾರು ನೂರಕ್ಕೂ ಹೆಚ್ಚು ಬೆದರಿಕೆ ಕರೆಗಳಾಗಿವೆ. ೭೦ಕ್ಕೂ ಹೆಚ್ಚು ಜಿಹಾದ್ ಪ್ರಕರಣಗಳಲ್ಲಿ ೩೨ ಹುಡುಗಿಯರನ್ನು ಮರಳಿ ಕರೆತರಲಾಗಿದೆ ಎಂದರು.ಇಡೀ ದೇಶದಲ್ಲಿ ಮುಸ್ಲಿಂ ಸಮುದಾಯದವರು ತಮ್ಮ ಜನಸಂಖ್ಯೆ ಹೆಚ್ಚಳಕ್ಕಾಗಿ ಲವ್ ಜಿಹಾದ್ನಂತಹ ತಂತ್ರಗಾರಿಕೆಯಲ್ಲಿ ತೊಡಗಿಸಿದ್ದಾರೆ. ಅದರ ವಿರುದ್ಧ ರಾಜ್ಯದ್ಯಾಂತ ಹೋರಾಟವನ್ನು ಮಾಡುತ್ತಿದ್ದೇವೆ ಎಂದು ಮುತಾಲಿಕ್ ಹೇಳಿದರು.
ಗದಿಗೆಪ್ಪ ಕುರುವತ್ತಿ, ಶ್ರೀರಾಮ ಸೇನಾ ಧಾರವಾಡ ವಿಭಾಗ ಅಧ್ಯಕ್ಷ ಮುದುಕಣ್ಣ ವನಹಳ್ಳಿ, ರಾಕೇಶ್ ರಾಯಣ್ಣ, ವಿನಾಯಕ್ ಇಚ್ಚಂಗಿ, ಸಿದ್ಧಾರೂಢ ವಿಭೂತಿ ಮಠ, ಬಸವರಾಜ್ ಕಲ್ಲಪ್ಪನವರ್, ರಾಜು ಪೂಜಾರ್, ಫಕೀರೇಶ ಕಾಳೆ ಇದ್ದರು.