ಕನ್ನಡಪ್ರಭ ವಾರ್ತೆ ಚಾಮರಾಜನಗರ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಮರಾಜನಗರದ ಶ್ರೀ ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವ ಹಾಗೂ ಜಾತ್ರಾ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಷಾಢಮಾಸದಲ್ಲಿ ಇಡೀ ರಾಜ್ಯದಲ್ಲಿಯೇ ನಡೆಯುವ ಏಕೈಕ ರಥೋತ್ಸವ ಇದಾಗಿದ್ದು, ಜಿಲ್ಲೆ, ಹೊರಜಿಲ್ಲೆ, ಹೊರರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ. ಭಕ್ತಾದಿಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಚಾಮರಾಜೇಶ್ವರಸ್ವಾಮಿ ಮಹಾ ರಥೋತ್ಸವವು ಜು. 28ರಂದು ಬೆಳಗ್ಗೆ 11.30 ಗಂಟೆಗೆ ಆರಂಭವಾಗಲಿದೆ. ಮಹಾರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ಜು. 21ರಿಂದ ಆ. 1ರವರೆಗೂ ವಿವಿಧ ಪೂಜಾ ಕೈಂಕರ್ಯಗಳು ಜರುಗಲಿವೆ. ರಥೋತ್ಸವದ ಪೂಜೆ ಆಚರಣೆ, ಪರಂಪರೆ ಹಾಗೂ ಸಂಪ್ರದಾಯಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ಜಾತ್ರಾ ಮಹೋತ್ಸವದ ಅಚ್ಚುಕಟ್ಟು ಆಯೋಜನೆಯಲ್ಲಿ ಲೋಪಗಳಾಗಬಾರದು. ಕಳೆದ ಬಾರಿಯಂತೆ ಈ ಬಾರಿಯೂ ಮಹಾರಥೋತ್ಸವ ಯಶಸ್ಸಿಗೆ ಮುಂದಾಗುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅರಣ್ಯ ಇಲಾಖೆಯು ರಥ ಸಂಚರಿಸುವ ಮಾರ್ಗದಲ್ಲಿ ರಥೋತ್ಸವಕ್ಕೆ ಅಡಚಣೆಯಾಗುವ ಮರದ ಕೊಂಬೆಗಳನ್ನು ತೆರವುಗೊಳಿಸಬೇಕು. ಚೆಸ್ಕಾಂ ವತಿಯಿಂದ ರಥೋತ್ಸವದ ಪೂಜಾ ಕಾರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ನಿರಂತರ ವಿದ್ಯುತ್ ಪೂರೈಸಬೇಕು. ರಥ ಸಾಗುವ ಮಾರ್ಗದಲ್ಲಿ ಹಾದುಹೋಗಿರುವ ವಿದ್ಯುತ್ ಹೈಟೆಂನ್ಷನ್ ವೈರ್ಗಳು ಹಾಗೂ ಕೇಬಲ್ ವೈರ್ಗಳನ್ನು ತೆರವುಗೊಳಿಸಬೇಕು. ಅಬಕಾರಿ ಇಲಾಖೆಯು ರಥೋತ್ಸವ ದಿನದಂದು ಮದ್ಯ ಮಾರಾಟ ನಿಷೇಧಿಸಬೇಕು. ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಂತೆ ಅಗ್ನಿಶಾಮಕ ಇಲಾಖೆ ಎಚ್ಚರ ವಹಿಸಬೇಕು. ಲೋಕೋಪಯೋಗಿ ಇಲಾಖೆಯು ರಥೋತ್ಸವಕ್ಕೆ ರಥದ ಫಿಟ್ನೆಸ್ ಪ್ರಮಾಣ ಪತ್ರ ಸಲ್ಲಿಸಬೇಕು. ಆರೋಗ್ಯ ಇಲಾಖೆಯು ಪ್ರಥಮ ಚಿಕಿತ್ಸೆ ಸೇರಿದಂತೆ ಆರೋಗ್ಯ ಸೇವೆಗಳಿಗಾಗಿ ಆ್ಯಂಬುಲೆನ್ಸ್ ಗಳನ್ನು ಸನ್ನದ್ಧವಾಗಿಡುವಂತೆ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ತಹಸೀಲ್ದಾರ್ ಬಿ. ಗಿರಿಜಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಎಸ್. ರಾಜು, ಚಾಮರಾಜೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರಾಜಶೇಖರ್, ಅರ್ಚಕರಾದ ರಾಮಕೃಷ್ಣ ಭಾರದ್ವಾಜ್, ಮುಖಂಡರಾದ ವೆಂಕಟ ನಾಗಪ್ಪಶೆಟ್ಟಿ, ಚಾ.ರಂ. ಶ್ರೀನಿವಾಸಗೌಡ, ಮಹೇಶ್ ಕುದರ್, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
20ಸಿಎಚ್ಎನ್51
---------------