;Resize=(412,232))
ಮಂಗಳೂರು : ಪಾನ್ ಮಸಾಲದಲ್ಲಿ ನಿಕೋಟಿನ್, ತಂಬಾಕು ಹಾಗೂ ಗುಟ್ಕಾ ಮಿಶ್ರಣ ಮಾಡಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಆದರೆ ಶುದ್ಧ ಪಾನ್ ಮಸಾಲ ಪ್ರತ್ಯೇಕವಾಗಿ ಬಂದರೆ ಯಾವುದೇ ತೊಂದರೆ ಇಲ್ಲ. ಈ ಕ್ರಮದಿಂದ ಅಡಕೆ ಬೆಳೆಗಾರರಿಗೆ ಯಾವುದೇ ನಷ್ಟವಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಯು.ಟಿ.ಖಾದರ್ ಪುನರುಚ್ಚರಿಸಿದ್ದಾರೆ.
ಮಂಗಳೂರು ನೆಹರೂ ಮೈದಾನದಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 2014ರಲ್ಲಿ ನಾನು ಗುಟ್ಕಾ ನಿಷೇಧಿಸಿದಾಗಲೂ ಅಡಕೆ ಬೆಲೆ ಇಳಿಕೆಯಾಗಲಿದೆ ಎಂದು ಅಪಪ್ರಚಾರ ಮಾಡಲಾಗಿತ್ತು. ಆದರೆ ಆ ಬಳಿಕ ಅಡಕೆ ಧಾರಣೆ ಜಾಸ್ತಿಯಾಯಿತೇ ಹೊರತು ಕಡಿಮೆಯಾಗಲಿಲ್ಲ. ಈಗಲೂ ಅಡಕೆ ಬೆಳೆಗಾರರಿಗೆ ಅಥವಾ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದರು.