ಹುಲಿ ಸಾವು ಕೇಸ್‌: 3 ಅಧಿಕಾರಿಗಳಿಗೆ ಕಡ್ಡಾಯ ರಜೆ ಶಿಕ್ಷೆ

Published : Jul 01, 2025, 10:32 AM IST
Tiger Death

ಸಾರಾಂಶ

ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

 ಬೆಂಗಳೂರು :  ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರು ಅರಣ್ಯ ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿ ಅರಣ್ಯ ಪಡೆ ಮುಖ್ಯಸ್ಥರು ಆದೇಶಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶದಲ್ಲಿ ಒಂದು ತಾಯಿ ಮತ್ತು ನಾಲ್ಕು ಮರಿ ಹುಲಿಗಳು ವಿಷ ಪ್ರಾಶನದಿಂದ ಮೃತಪಟ್ಟಿದ್ದು, ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಉನ್ನತಮಟ್ಟದ ತನಿಖೆಯನ್ನೂ ನಡೆಸಲಾಗುತ್ತಿದೆ. ಇದರ ನಡುವೆಯೇ ಹುಲಿ ಸಾವು ತಡೆಯದ ಹಾಗೂ ಹುಲಿಗಳು ಸಾವಿಗೀಡಾಗಿ 2 ದಿನಗಳಾದರೂ ಅದನ್ನು ಪತ್ತೆ ಮಾಡದೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಮೂವರು ಅಧಿಕಾರಿಗಳನ್ನು ಕಡ್ಡಾಯ ರಜೆ ಮೇಲೆ ತೆರಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಹುಲಿಗಳ ಕಳೇಬರ ರಸ್ತೆಯಿಂದ ಕೇವಲ 100 ಮೀ. ದೂರದಲ್ಲಿ ಪತ್ತೆಯಾಗಿತ್ತು. ಅಲ್ಲದೆ, ಕಳ್ಳಬೇಟೆ ನಿಗ್ರಹ ಶಿಬಿರದ 800 ಮೀ. ದೂರದಲ್ಲಿ ಈ ದುರ್ಘಟನೆ ನಡೆದಿದೆ. ಜತೆಗೆ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಗೆ 3 ತಿಂಗಳಿನಿಂದ ವೇತನ ನೀಡದೆ ಗಸ್ತು ಕಾರ್ಯಕ್ಕೆ ಅಡಚಣೆ ಉಂಟಾಗುವಂತೆ ಮಾಡಲಾಗಿದೆ. ಇದಕ್ಕೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ವೈ. ಚಕ್ರಪಾಣಿ, ಹನೂರು ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಹಾಗೂ ಹೂಗ್ಯಂ ವನ್ಯಜೀವಿ ವಲಯದ ಉಪ ವಲಯ ಅರಣ್ಯಾಧಿಕಾರಿ ಮಾದೇಶ ಅವರ ಕರ್ತವ್ಯ ಲೋಪ ಕಾರಣ ಎಂದು ಪತ್ತೆ ಮಾಡಲಾಗಿದೆ. ಹೀಗಾಗಿ ಆ ಮೂವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಉನ್ನತ ಮಟ್ಟದ ತನಿಖೆ ನಂತರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಲೇಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಸಂತೋಷ್‌ ಕುಮಾರ್‌ ಅವರನ್ನು ನೇಮಿಸಲಾಗಿದೆ. ಹಾಗೆಯೇ, ಕೊಳ್ಳೆಗಾಲ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್‌ ಮನೋಹರ್‌ ಅಹಿರಿ ಅವರಿಗೆ ಹನೂರು ವ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಹಾಗೂ ಹನೂರು ಬಫರ್‌ ವಲಯ ಅಧಿಕಾರಿ ಕೆ. ಉಮಾಪತಿ ಅವರಿಗೆ ಹೂಗ್ಯಂ ವನ್ಯಜೀವಿ ವಲಯದ ಉಪ ವಲಯ ಅರಣ್ಯಾಧಿಕಾರಿಯಾಗಿ ಹೆಚ್ಚುವರಿಯಾಗಿ ನೇಮಿಸಿ ಆದೇಶಿಸಲಾಗಿದೆ.

PREV
Get the latest news from Chamarajanagar district (ಚಾಮರಾಜನಗರ ಸುದ್ದಿ) — covering local developments, environment and wildlife, civic issues, politics, culture, tourism, agriculture and community stories. Stay updated with timely headlines and in-depth coverage from Chamarajanagar on Kannada Prabha.
Read more Articles on

Recommended Stories

ತಂತಿ ಬೇಲಿ ನೆಗೆದು 4 ಹಸು ಬಲಿ ಪಡೆದ ಚಿರತೆ
ಕೊಳ್ಳೇಗಾಲ ಗ್ರಾಮ ಅತ್ಯಂತ ಪವಿತ್ರ ಸ್ಥಳ